ಹೈದರಾಬಾದ್: ಅಯೋಧ್ಯೆ ರಾಮಲಲ್ಲಾ ಪ್ರಾಣಪ್ರತಿಷ್ಠೆ ಜ.22ರಂದು ನಡೆಯಲಿದೆ. ದೇಶ ವಿದೇಶಗಳಿಂದ ಉಡುಗೊರೆಗಳ ಹರಿದುಬರುತ್ತಿದೆ. ಇದೀಗ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಪ್ರತಿದಿನ ಒಂದೊಂದು ಕೆಜಿ ಲಡ್ಡುವನ್ನು ಮೀಸಲಿಟ್ಟಿದ್ದಾರೆ. ಶ್ರೀರಾಮನ ನೈವೇದ್ಯಕ್ಕಾಗಿ 1,265 ಕೆ.ಜಿ ತೂಕದ ವಿಶೇಷ ಲಡ್ಡು ತಯಾರಿಸಿದ್ದಾರೆ.
ಹೈದರಾಬಾದ್ ಮೂಲದ ವ್ಯಕ್ತಿ ನಾಗಭೂಷಣ ರೆಡ್ಡಿ ರಾಮಲಲ್ಲಾ ನೈವೇದ್ಯಕ್ಕಾಗಿ ಲಡ್ಡು ತಯಾರಿಸಿದ್ದಾರೆ. ಬುಧವಾರ (ಇಂದು) ರಾಮಮಂದಿರಕ್ಕೆ ಅರ್ಪಿಸಲಿದ್ದಾರೆ. ಇದರೊಂದಿಗೆ ಸಹೋದರ ಲಕ್ಷ್ಮಣ, ಪತ್ನಿ ಸೀತಾ, ಭಂಟ ಹನುಮಾನ್ ಹೆಸರಿನ ಲಡ್ಡುಗಳನ್ನೂ ತಯಾರಿಸಲಾಗಿದೆ. ದುಶಾಸನ್ ಎಂಬ ಸ್ವೀಟ್ ಮಾಸ್ಟರ್ ಈ ಲಡ್ಡುವನ್ನು ತಯಾರಿಸಿದ್ದಾರೆ. ಜೊತೆಗೆ ಸುಮಾರು 30 ಜನರ 24 ಗಂಟೆಗಳ ಕಾಲ ಶ್ರಮಿಸಿ ಈ ವಿಶೇಷ ಲಡ್ಡು ತಯಾರಿಸಿದ್ದು, ಇದನ್ನ ಜೋಡಿಸಲು 4 ಗಂಟೆ ತೆಗೆದುಕೊಂಡಿದ್ದಾರೆ ಎಂದು ನಾಗಭೂಷಣರೆಡ್ಡಿ ಹೇಳಿದ್ದಾರೆ.