News Karnataka Kannada
Saturday, April 27 2024
ಗುಜರಾತ್

ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ: 7 ಕಾರ್ಮಿಕರ ಶವ ಪತ್ತೆ

ಗುಜರಾತಿನ ಸೂರತ್ ನಗರದಲ್ಲಿ ರಾಸಾಯನಿಕ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಒಂದು ದಿನದ ನಂತರ, ಕಾಣೆಯಾದ ಏಳು ಕಾರ್ಮಿಕರ ಶವಗಳನ್ನು ಇಂದು ಮುಂಜಾನೆ ಆವರಣದಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Photo Credit : News Kannada

ಸೂರತ್: ಗುಜರಾತಿನ ಸೂರತ್ ನಗರದಲ್ಲಿ ರಾಸಾಯನಿಕ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಒಂದು ದಿನದ ನಂತರ, ಕಾಣೆಯಾದ ಏಳು ಕಾರ್ಮಿಕರ ಶವಗಳನ್ನು ಇಂದು ಮುಂಜಾನೆ ಆವರಣದಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಸಚಿನ್ ಕೈಗಾರಿಕಾ ಪ್ರದೇಶದಲ್ಲಿನ ಈಥರ್ ಇಂಡಸ್ಟ್ರೀಸ್ ಲಿಮಿಟೆಡ್‍ನ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಮೃತಪಟ್ಟ ಏಳು ಜನರ ಪೈಕಿ ಒಬ್ಬರು ಕಂಪನಿಯ ಉದ್ಯೋಗಿಯಾಗಿದ್ದು, ಆರು ಮಂದಿ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸೂರತ್ ಕಲೆಕ್ಟರ್ ಆಯುಷ್ ಓಕ್ ಹೇಳಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವ 24 ಜನರು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು