ಬೊಟಾಡ: ಗುಜರಾತ್ ನ ಬೊಟಾಡ ಜಿಲ್ಲೆಯ ರೊಜಿಡಾ ಗ್ರಾಮದಲ್ಲಿ ‘ನಕಲಿ ಸಾರಾಯಿ ಸೇವಿಸಿ 7 ಮಂದಿ ಮೃತಪಟ್ಟಿದ್ದು, 10 ಜನರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಆಶಿಶ್ ಭಾಟಿಯಾ ಹೇಳಿದ್ದಾರೆ.
‘ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ರೋಜಿಡಾ ಹಾಗೂ ಸುತ್ತಲಿನ ಕೆಲ ಗ್ರಾಮಗಳ ಜನರು ಸೋಮವಾರ ಬೆಳಿಗ್ಗೆ ಬರ್ವಾಲಾ ಹಾಗೂ ಬೊಟಾಡದಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಈ ಪೈಕಿ ಇಬ್ಬರು ಬೆಳಿಗ್ಗೆಯೇ ಸಾವಿಗೀಡಾಗಿದ್ದರು. ಸಂಜೆಯ ವೇಳೆಗೆ ಇನ್ನೂ ಐವರು ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
‘ಭಾನುವಾರ ರಾತ್ರಿ ಅಂಗಡಿಯೊಂದರಲ್ಲಿ ಮದ್ಯ ಖರೀದಿಸಿದ್ದೆವು. ಅದನ್ನು ಸೇವಿಸಿದ ಬಳಿಕ ಸುಮಾರು 15 ಮಂದಿಯ ಆರೋಗ್ಯ ಹದಗೆಟ್ಟಿತ್ತು. ಸೋಮವಾರ ಬೆಳಿಗ್ಗೆ ನಮ್ಮನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಹಿಮ್ಮತ್ ಭಾಯ್ ಎಂಬುವರು ಹೇಳಿದ್ದಾರೆ. ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಪ್ರಕರಣದ ತನಿಖೆಗಾಗಿ ಡಿವೈಎಸ್ಪಿ ದರ್ಜೆಯ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಈ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದೆ.
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…
ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…