Categories: ಗುಜರಾತ್

ಅಹಮದಾಬಾದ್‌: ಪತಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಪತ್ನಿ

ಅಹಮದಾಬಾದ್‌:  ಗುಜರಾತ್‌ನ ಅಹಮದಾಬಾದ್‌ನಲ್ಲಿ, ಹೆಂಡತಿ, ಗಂಡನನ್ನ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾಳೆ.  ಆತ ಮಗನನ್ನ ಹಿಗ್ಗಾಮುಗ್ಗ ಹೊಡೆಯುತ್ತಿದ್ದ. ಮಗ ಎಷ್ಟು ಬೇಡ ಅಂದರೂ ಅಪ್ಪ ಮಾತ್ರ ಒಂದೇ ಸಮನೆ ಹೊಡೆಯುತ್ತಲೇ ಇದ್ದ. ಕೊನೆಗೆ ತಾಳ್ಮೆ ಕಳೆದುಕೊಂಡ ತಾಯಿ ಮಗನನ್ನ ರಕ್ಷಿಸೋಕೆ ಮುಂದಾಗುತ್ತಾಳೆ. ಮಗನ ಸಂಕಟ ನೋಡಲಾಗದ ಆ ತಾಯಿ ಕೊನೆಗೆ ಗಂಡನಿಗೆನೇ ಚಾಕು ಚುಚ್ಚಿ ಕೊಲೆ ಮಾಡುತ್ತಾಳೆ.

ವಿಜಯ್ ಯಾದವ್ ಮತ್ತು ದೀಪ್ ಮಾಲಾ ಇವರಿಗೆ ಮೂವರು ಮಕ್ಕಳು. ವಿಜಯ್ ಯಾದವ್ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್ನ ಬಸ್ ಸರ್ವಿಸ್‌ ಕಂಡೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ 15ದಿನಗಳ ಹಿಂದೆ ಆತ ಕೆಲಸವನ್ನ ಕಳೆದುಕೊಂಡಿದ್ದ. ಆದ ಕಾರಣ ಕೆಲಸವೇ ಇಲ್ಲದೇ ಇಡೀ ದಿನ ಮನೆಯಲ್ಲೇ ಇರುತ್ತಿದ್ದ. ಎಂದಿನಂತೆ ಆತ ಬೆಳಿಗ್ಗೆ ಎದ್ದು ಟಿವಿ ಆನ್ ಮಾಡಿದ್ದಾನೆ. ಆದರೆ ಟಿವಿ ಕೆಟ್ಟು ಹೋಗಿದ್ದರಿಂದ ಟಿವಿಯಲ್ಲಿ ಯಾವುದೇ ಚಾನೆಲ್‌ಗಳು ಬರ್ತಿರಲಿಲ್ಲ. ಆಗ ವಿಜಯ್‌ ಯಾದವ್‌ಗೆ ಇದು ಹೆಂಡತಿ ಮತ್ತು ಮಗ ಮಂಜಿತ್‌ ಮಾಡಿರುವ ಕಿತಾಪತಿ ಅಂತ ಅನಿಸಿದೆ. ಇದೇ ಕಾರಣಕ್ಕೆ ಸಿಟ್ಟಿನಿಂದ ಮಗನನ್ನ ಕರೆದು ಹಿಗ್ಗಾಮುಗ್ಗ ಹೊಡೆದಿದ್ದಾನೆ.

ಅಪ್ಪ ಹೊಡೆಯುತ್ತಿರುವ ಹೊಡೆತವನ್ನ ತಾಳದೇ ಒದ್ದಾಡುತ್ತಿದ್ದ ಮಗನ ರಕ್ಷಣೆಗೆ ತಾಯಿ ದೀಪ್‌ ಮಾಲಾ ಓಡಿ ಬಂದಿದ್ದಾಳೆ. ಗಂಡ ಹೆಂಡತಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಕೈಗೆ ಸಿಕ್ಕ ಚಾಕುವನ್ನ ತೆಗೆದುಕೊಂಡು ಗಂಡನ ಎದೆಗೆ ಚುಚ್ಚಿದ್ದಾಳೆ. ಆ ತಕ್ಷಣವೇ ಮೈದುನನನ್ನ ಕರೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟು ಹೊತ್ತಿಗೆ ವಿಜಯ್ ಯಾದವ್ ಸತ್ತು ಹೋಗಿದ್ದ.

ಈಗ ಅಹಮದಾಬಾದ್ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ಹತ್ಯೆಯಲ್ಲಿ ಬಳಸಲಾಗಿರುವ ಚಾಕುವನ್ನ ವಶಪಡಿಸಿಕೊಂಡಿದ್ದಾರೆ. ಅಹಮದಾಬಾದ್‌ನ ಸೋಲಾ ಹೈಕೋರ್ಟ್ ಪೊಲೀಸ್ ಸ್ಟೆಷನ್‌ನ ಇನ್ಸ್‌ಪೆಕ್ಟರ್‌ ವಾಧೇಲಾ ಅವರು ಹೇಳುವ ಪ್ರಕಾರ, ಕುಟುಂಬದಲ್ಲಿ ನಡೆದ ಕಲಹವೇ ಈ ಕೊಲೆಗೆ ಕಾರಣ ಅಂತ ಹೇಳಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮಾಡಲಾಗುತ್ತಿದ್ದು, ಆರೋಪಿಯನ್ನ ಬಂಧಿಸಲಾಗಿದೆ.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago