News Karnataka Kannada
Monday, May 06 2024
ಗುಜರಾತ್

ಕಾಂಗ್ರೆಸ್​ ಅಭ್ಯರ್ಥಿ ನೀಲೇಶ್​ ಕುಂಭಾನಿ ಪಕ್ಷದಿಂದ ಉಚ್ಚಾಟನೆ

ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿ ನೀಲೇಶ್​ ಕುಂಭಾನಿ ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ.
Photo Credit : NewsKarnataka

ಗುಜರಾತ್: ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿ ನೀಲೇಶ್​ ಕುಂಭಾನಿ ನಾಮಪತ್ರ ತಿರಸ್ಕೃತಗೊಳ್ಳುತ್ತಿದ್ದಂತೆ ಪಕ್ಷವು ಅವರನ್ನು ಉಚ್ಛಾಟಿಸಿದೆ.

ನೀಲೇಶ್​ ಅವರ ನಾಮಪತ್ರ ರದ್ದಾದ ನಂತರ ಇತರೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್​ ದಲಾಲ್ ಅವರನ್ನು ಅವರೋಧವಾಗಿ ಆಯ್ಕೆ ಮಾಡಲಾಗಿತ್ತು.

ನೀಲೇಶ್​ ಅವರನ್ನು ಕಾಂಗ್ರೆಸ್​ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿದೆ. ನೀಲೇಶ್​ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಲು ಕಾಂಗ್ರೆಸ್​ ಶಿಸ್ತು ಸಮಿತಿ ನಿರ್ಧರಿಸಿದೆ. ಸೂರತ್ ಕ್ಷೇತ್ರದಿಂದ ನಾಮಪತ್ರ ರದ್ದತಿಗೆ ನೀಲೇಶ್​ ಕುಂಭಾಣಿ ಹೊಣೆಗಾರಿಕೆಯನ್ನು ಶಿಸ್ತು ಸಮಿತಿ ಹೊರಿಸಿದೆ.

ನಾಮಪತ್ರ ರದ್ದು ನಿಮ್ಮ ನಿರ್ಲಕ್ಷ್ಯ ಅಥವಾ ಬಿಜೆಪಿ ಜತೆಗಿನ ಒಡನಾಟವನ್ನು ತೋರಿಸುತ್ತದೆ ಎಂದು ಶಿಸ್ತು ಸಮಿತಿ ನಿರ್ಧಾರದಲ್ಲಿ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು