ಗುಜರಾತ್: ಪ್ರವಾದಿ ಮುಹಮ್ಮದ್ ಬಗ್ಗೆ ಅನುಚಿತ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ವಿವಾದ ಬೂದಿ ಮುಚ್ಚಿದ ಕೆಂಡದಂತಿದೆ.
ನೂಪುರ್ ಶರ್ಮಾ ಪರ/ವಿರುದ್ಧ ಪ್ರತಿಭಟನೆಗಳೂ ನಡೆಯುತ್ತಿದ್ದು, ಶರ್ಮಾ ಬೆಂಬಲಿಸಿದವರಿಗೆ ಜೀವ ಬೆದರಿಕೆ ಕರೆಗಳೂ ಸಹ ಬಂದಿವೆ. ಇದೀಗ ಗುಜರಾತ್ನ ಸೂರತ್ನ ಉದ್ಯಮಿಯೊಬ್ಬರಿಗೆ ಕೆಲವರು ಕೊಲೆ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ನೂಪುರ್ ಶರ್ಮಾ ಅವರ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಕ್ಕಾಗಿ ಮೂವರು ಕಿರಾತಕರು ಉದ್ಯಮಿಯೊಬ್ಬರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.