Categories: ಗುಜರಾತ್

ಇಂತಹ ಸುಳ್ಳುಗಾರ ಪ್ರಧಾನಿಯನ್ನು ಮೊದಲ ಬಾರಿ ನೋಡುತ್ತಿದ್ದೇನೆ: ಪ್ರಿಯಾಂಕಾ ಗಾಂಧಿ

ಗುಜರಾತ್: ಕಾಂಗ್ರೆಸ್‌ನ ಆಸ್ತಿ ಮರುಹಂಚಿಕೆ ವಿಚಾರವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಸುಳ್ಳುಗಾರನೆಂದು ಕರೆದಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ತಾನು ಈ ಮುಂಚೆ, ತಂದೆ ರಾಜೀವ್‌ ಗಾಂಧಿ ಸೇರಿದಂತೆ ಹಲವು ಪ್ರಧಾನಿಗಳನ್ನು ಕಂಡಿದ್ದೇನೆ ಎಂದರು.

ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್‌ ಭರವಸೆ ನೀಡಿರುವ ಆಸ್ತಿ ಮರುಹಂಚಿಕೆ ವಿಚಾರವನ್ನು ಉಲ್ಲೇಖಿಸಿ ಮೋದಿ, ಇವರು ಮಹಿಳೆಯರ ಮಂಗಳಸೂತ್ರವನ್ನೂ ಬಿಡುವುದಿಲ್ಲ ಎಂದು ಆರೋಪಿಸಿದ್ದರು. ಇದನ್ನು ಮಲ್ಲಿಖಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ ಪಕ್ಷ ಅಲ್ಲಗಳೆದಿದೆ.

ಗುಜರಾತಿನ ಧರಮ್‌ಪುರ್‌ ಗ್ರಾಮದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಯಾಂಕಾ, ʼನಮ್ಮ ಪರಿವಾರದವರೂ ಸೇರಿದಂತೆ ನಾನು ಈವರೆಗೆ ಹಲವು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು. ಪ್ರಧಾನಿಯಾಗಿದ್ದ ನನ್ನ ತಂದೆ ರಾಜೀವ್‌ ಗಾಂಧಿಯ ದೇಹವನ್ನು ನಾನು ತುಂಡುಗಳಲ್ಲಿ ಮನೆಗೆ ತಂದಿದ್ದೆʼ ಎಂದರು.

ಮುಂದುವರೆದು ಮಾತನಾಡಿದ ಅವರು, ʼಮನಮೋಹನ್‌ ಸಿಂಗ್‌ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಕಾಂಗ್ರೆಸ್‌ ಪಕ್ಷದಿಂದ ಹೊರಗೆ ನೋಡಿದರೆ ಅಟಲ್‌ ಬಿಹಾರಿ ವಾಜ್ಪೇಯಿ ಸಭ್ಯರಾಗಿದ್ದರು. ಜನರೆದುರು ಸುಳ್ಳು ಹೇಳುವ ಮೊದಲ ಪ್ರಧಾನಿಯನ್ನು ನಾನೀಗ ನೋಡುತ್ತಿದ್ದೇನೆʼ ಎಂದು ಮೋದಿಯನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.

ಎಕ್ಸರೇ ಯಂತ್ರಗಳ ಮೂಲಕ ಸ್ಕ್ಯಾನ್‌ ಮಾಡಿ ಮಂಗಳಸೂತ್ರ ಸೇರಿದಂತೆ ನಿಮ್ಮೆಲ್ಲಾ ಒಡವೆಗಳನ್ನು ಕಾಂಗ್ರೆಸ್‌ ಕಸಿದು ಹಂಚುತ್ತದೆ ಎಂಬ ಮೋದಿ ಹೇಳಿಕೆಗೆ ಪ್ರಿಯಾಂಕಾ ಈರೀತಿ ಪ್ರತಿಕ್ರಿಯಿದ್ದಾರೆ.

Maithri S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

42 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

59 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago