ಗುಜರಾತ್: ಕಾಂಗ್ರೆಸ್ನ ಆಸ್ತಿ ಮರುಹಂಚಿಕೆ ವಿಚಾರವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಸುಳ್ಳುಗಾರನೆಂದು ಕರೆದಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ತಾನು ಈ ಮುಂಚೆ, ತಂದೆ ರಾಜೀವ್ ಗಾಂಧಿ ಸೇರಿದಂತೆ ಹಲವು ಪ್ರಧಾನಿಗಳನ್ನು ಕಂಡಿದ್ದೇನೆ ಎಂದರು.
ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಭರವಸೆ ನೀಡಿರುವ ಆಸ್ತಿ ಮರುಹಂಚಿಕೆ ವಿಚಾರವನ್ನು ಉಲ್ಲೇಖಿಸಿ ಮೋದಿ, ಇವರು ಮಹಿಳೆಯರ ಮಂಗಳಸೂತ್ರವನ್ನೂ ಬಿಡುವುದಿಲ್ಲ ಎಂದು ಆರೋಪಿಸಿದ್ದರು. ಇದನ್ನು ಮಲ್ಲಿಖಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಪಕ್ಷ ಅಲ್ಲಗಳೆದಿದೆ.
ಗುಜರಾತಿನ ಧರಮ್ಪುರ್ ಗ್ರಾಮದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಯಾಂಕಾ, ʼನಮ್ಮ ಪರಿವಾರದವರೂ ಸೇರಿದಂತೆ ನಾನು ಈವರೆಗೆ ಹಲವು ಪ್ರಧಾನಿಗಳನ್ನು ನೋಡಿದ್ದೇನೆ. ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು. ಪ್ರಧಾನಿಯಾಗಿದ್ದ ನನ್ನ ತಂದೆ ರಾಜೀವ್ ಗಾಂಧಿಯ ದೇಹವನ್ನು ನಾನು ತುಂಡುಗಳಲ್ಲಿ ಮನೆಗೆ ತಂದಿದ್ದೆʼ ಎಂದರು.
ಮುಂದುವರೆದು ಮಾತನಾಡಿದ ಅವರು, ʼಮನಮೋಹನ್ ಸಿಂಗ್ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಕಾಂಗ್ರೆಸ್ ಪಕ್ಷದಿಂದ ಹೊರಗೆ ನೋಡಿದರೆ ಅಟಲ್ ಬಿಹಾರಿ ವಾಜ್ಪೇಯಿ ಸಭ್ಯರಾಗಿದ್ದರು. ಜನರೆದುರು ಸುಳ್ಳು ಹೇಳುವ ಮೊದಲ ಪ್ರಧಾನಿಯನ್ನು ನಾನೀಗ ನೋಡುತ್ತಿದ್ದೇನೆʼ ಎಂದು ಮೋದಿಯನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.
ಎಕ್ಸರೇ ಯಂತ್ರಗಳ ಮೂಲಕ ಸ್ಕ್ಯಾನ್ ಮಾಡಿ ಮಂಗಳಸೂತ್ರ ಸೇರಿದಂತೆ ನಿಮ್ಮೆಲ್ಲಾ ಒಡವೆಗಳನ್ನು ಕಾಂಗ್ರೆಸ್ ಕಸಿದು ಹಂಚುತ್ತದೆ ಎಂಬ ಮೋದಿ ಹೇಳಿಕೆಗೆ ಪ್ರಿಯಾಂಕಾ ಈರೀತಿ ಪ್ರತಿಕ್ರಿಯಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…