ಮೊಡಾಸಾ: ಗುಜರಾತ್ ಅರಾವಳಿ ಜಿಲ್ಲೆಯಲ್ಲಿ ಶುಕ್ರವಾರ ಎಸ್ಯುವಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಯಾತ್ರಾರ್ಥಿಗಳು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಪಂಚಮಹಲ್ ಜಿಲ್ಲೆಯ ಸಂಘವೊಂದು ಆಯೋಜಿಸಿದ್ದ ಧಾರ್ಮಿಕ ಪಾದಯಾತ್ರೆಯ ಭಾಗವಾಗಿದ್ದರು. ಅವರು ಬನಸ್ಕಾಂತದ ಅಂಬಾಜಿ ದೇವಾಲಯದ ಕಡೆಗೆ ಹೋಗುತ್ತಿದ್ದಾಗ ಕೃಷ್ಣಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಗಾಯಗಳಿಗಾಗಿ ಪ್ರಸ್ತುತ ಮೊಡಾಸಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸಂತ್ರಸ್ತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 4 ಲಕ್ಷ ರೂ., ಗಾಯಾಳುಗಳಿಗೆ 50,000 ರೂ.ಘೋಷಿಸಿದ್ದಾರೆ.