ಗುಜರಾತ್: ದೋಣಿಯೊಂದು ಮಗುಚಿ ೬ ಮಕ್ಕಳು ಸಾವನ್ನಪ್ಪಿರುವ ಘಟನೆ ಇಲ್ಲಿನ ವಡೋದರಾದ ಹಾರಣಿ ಕೆರೆಯಲ್ಲಿ ನಡೆದಿದೆ. ಘಟನೆ ನಡೆದಾಗ ದೋಣಿಯಲ್ಲಿ ೧೧ ಮಕ್ಕಳಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಐವರನ್ನು ಕೆರೆಯಿಂದ ಮೇಲೆತ್ತಿ ರಕ್ಷಿಸಿದೆ.
ಘಟನೆಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂತಾಪ ಸೂಚಿಸಿದ್ದಾರೆ. ʼದೋಣಿ ತಲೆಕೆಳಗಾಗಿ ಅದರಲ್ಲಿದ್ದ ಮಕ್ಕಳು ಕೆರೆಯಲ್ಲಿ ಕೊಚ್ಚಿಹೋಗಿದ್ದು ಹೃದಯವಿದ್ರಾವಕ. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಲಭಿಸಲಿ ಹಾಗು ಅವರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ರಕ್ಷಣಾ ಕಾರ್ಯಾಚರಣೆಯು ನಡೆಯುತ್ತಿದ್ದು, ಅಗತ್ಯ ಚಿಕಿತ್ಸೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆʼ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.