News Karnataka Kannada
Monday, April 29 2024
ಗುಜರಾತ್

ಬಾಂಬ್ ಸ್ಫೋಟದ ದಿನಗಳಿಗೆ ಭಾರತ ಮರಳದಂತೆ ನೋಡಿಕೊಳ್ಳಬೇಕಿದೆ: ಪ್ರಧಾನಿ ಮೋದಿ

We have to ensure that India does not return to the days of bomb blasts: PM Modi
Photo Credit : News Kannada

ಕೆವಾಡಿಯಾ: ಭಯೋತ್ಪಾದಕರನ್ನು ರಕ್ಷಿಸುವ ಮನೋಭಾವ ಹೊಂದಿರುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಗುಜರಾತಿನ ನರ್ಮದಾ ಜಿಲ್ಲೆಯ ಏಕತಾ ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿ ಮಾತನಾಡಿದರು. ದೇಶವು ಬಾಂಬ್ ಸ್ಫೋಟದ ಯುಗಕ್ಕೆ ಹಿಂತಿರುಗದಂತೆ ಎಚ್ಚರವಹಿಸಬೇಕು. ದೇಶದ ಐಕ್ಯತೆಗೆ ಧಕ್ಕೆ ತರುತ್ತಿರುವವರ ಬಗ್ಗೆ ಎಚ್ಚರಿಕೆ ವಹಿಸಬೇಕು, ಜನನಿಬಿಡ ಸ್ಥಳಗಳಲ್ಲಿ ಬಾಂಬ್ ಸ್ಫೋಟದ ದಿನಗಳಿಗೆ ಭಾರತ ಮರಳದಂತೆ ನೋಡಿಕೊಳ್ಳಬೇಕಿದೆ ಎಂದು ಹೇಳಿದರು.

ದೇಶದ ಆಂತರಿಕ ಭದ್ರತೆಗೆ ಸರ್ದಾರ್ ಪಟೇಲ್ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ, ತಮ್ಮ ಅಧಿಕಾರದ 9 ವರ್ಷಗಳಲ್ಲಿ ರಾಷ್ಟ್ರೀಯ ಭದ್ರತೆಗೆ ನೀಡಿದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮಕ್ಕೆ ಮೊದಲು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅಲ್ಲದೆ ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ)ದಂದು ಪಟೇಲ್‌ ಅವರ ಪ್ರತಿಮೆಗೆ ‘ಜಲಾಭಿಷೇಕ’ ನೆರವೇರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು