News Karnataka Kannada
Sunday, May 05 2024
ದೇಶ

ಅಹಮದಾಬಾದ್‌ನ ಬಡವರ ಪಾಲಿಗೆ ದೇವರಾದ ಆಫ್ಘಾನ್ ಕ್ರಿಕೆಟಿಗ

Abrg
Photo Credit : News Kannada

ಅಹಮದಾಬಾದ್‌: ಆಫ್ಘಾನಿಸ್ತಾನ ಕ್ರಿಕೆಟ್ ತಂಡವು 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದಿಟ್ಟ ಹೋರಾಟದ ಹೊರತಾಗಿಯೂ ಸೆಮಿಫೈನಲ್ ಪ್ರವೇಶಿಸಲು ವಿಫಲವಾಗಿದೆ. ಆದರೆ ಇದೀಗ ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ರೆಹಮನುಲ್ಲಾ ಗುರ್ಬಾಜ್, ಅಹಮದಾಬಾದ್‌ನ ನಿರ್ಗತಿಕರ ಪಾಲಿಗೆ ಆಸರೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಹೌದು. . . ದೇಶವೇ ದೀಪಾವಳಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಿದೆ.

ಒಂದು ಕಡೆಯಾದರೆ, ಮತ್ತೊಂದೆಡೆ ಇನ್ನೂ ಎಷ್ಟೋ ಮಂದಿ ಈಗಲೂ ದೇಶದಲ್ಲಿ ತುತ್ತು ಊಟಕ್ಕೆ ಪರದಾಡುತ್ತಿದ್ದಾರೆ ಎನ್ನುವುದು ಕೂಡಾ ಸತ್ಯ. ಹೀಗಿರುವಾಗ ಆಫ್ಘಾನಿಸ್ತಾನ ಆರಂಭಿಕ ಬ್ಯಾಟರ್ ರೆಹಮನುಲ್ಲಾ ಗುರ್ಬಾಜ್, ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಅಹಮದಾಬಾದ್‌ನ ರಸ್ತೆ ಬದಿ ಮಲಗಿಕೊಂಡಿದ್ದ ನಿರ್ಗತಿಕರಿಗೆ ತಾವು ಸಂಪಾದಿಸಿದ ಹಣವನ್ನು ದಾನ ಮಾಡುವ ಮೂಲಕ ದೀಪಾವಳಿ ಆಚರಿಸಲು ಸರ್ಪ್ರೈಸ್ ನೀಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಬೀದಿಬದಿ ನಿರಾಶ್ರಿತರಾಗಿ ಮಲಗಿಕೊಂಡಿದ್ದ ಮಂದಿಯ ಬಳಿ ಅವರಿಗೆ ಅರಿವಿಲ್ಲದಂತೆ ಹಣವನ್ನು ನೀಡಿ ಕಾರಿನಲ್ಲಿ ತೆರಳಿದ್ದಾರೆ. ಈ ಮೂಲಕ ಬಡವರೂ ಕೂಡಾ ಖುಷಿಯಿಂದ ದೀಪಾವಳಿ ಆಚರಿಸುವಂತೆ ಆಗಲಿ ಎನ್ನುವ ಸಂದೇಶವನ್ನು ಸಾರಿದ್ದಾರೆ. ರೆಹಮನುಲ್ಲಾ ಗುರ್ಬಾಜ್ ಅವರ ಈ ಒಳ್ಳೆಯ ಗುಣ ನೆಟ್ಟಿಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು