ಗುರುಗ್ರಾಮ್: ಗುರುಗ್ರಾಮ್ನ ಮಸೀದಿಯೊಂದರ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಒಬ್ಬ ವ್ಯಕ್ತಿಯನ್ನು ಕೊಂದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಕ್ಟರ್ 57ರಲ್ಲಿರುವ ಅಂಜುಮನ್ ಜಮಾ ಮಸೀದಿಗೂ ಬೆಂಕಿ ಹಚ್ಚಲಾಗಿದೆ. ಅಗ್ನಿಶಾಮಕ ನಿಯಂತ್ರಣ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಹತೋಟಿಗೆ ತಂದವು.
ಕೇಂದ್ರ ಸಚಿವ ಮತ್ತು ಗುರುಗ್ರಾಮ್ ಸಂಸದ ರಾವ್ ಇಂದರ್ಜಿತ್ ಸಿಂಗ್ ಅವರು ಗುರುಗ್ರಾಮ್ನ ಮಸೀದಿಯೊಂದರ ಮೇಲೆ ಇಮಾಮ್ ಸೇರಿದಂತೆ ಇಬ್ಬರಿಗೆ ಗುಂಡು ಹಾರಿಸಿರುವುದಾಗಿ ಖಚಿತಪಡಿಸಿದ್ದಾರೆ.
ನಾನು ಗೃಹ ಖಾತೆಯ ರಾಜ್ಯ ಸಚಿವರೊಂದಿಗೆ ಮಾತನಾಡಿದ್ದೇನೆ. ಇಪ್ಪತ್ತು ಕಂಪನಿ ಅರೆಸೇನಾಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದಾಳಿಕೋರರನ್ನು ಗುರುತಿಸಿ, ವಿವಿಧೆಡೆ ದಾಳಿ ನಡೆಸಿ, ಹಲವು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಧಾರ್ಮಿಕ ಸ್ಥಳಗಳ ಸುತ್ತ ಭದ್ರತೆಯನ್ನು ಬಲಪಡಿಸಲಾಗಿದೆ. ಶಾಂತಿ ಕಾಪಾಡಲು ಪೊಲೀಸರು ಮತ್ತು ಆಡಳಿತ ಎರಡೂ ಸಮುದಾಯದ ಪ್ರಮುಖ ಸದಸ್ಯರೊಂದಿಗೆ ಸಭೆಗಳನ್ನು ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಹ್ನಾ, ಪಟೌಡಿ ಮತ್ತು ಮನೇಸರ್ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.