ಪ್ರಯಾಗರಾಜ್: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಧ್ಯಾಹ್ನ 2ಕ್ಕೆ ತೀರ್ಪು ನೀಡಲಿದೆ.
ಇದಕ್ಕೂ ಮುನ್ನ ಜುಲೈ 27ರಂದು ನಡೆದ ವಿಚಾರಣೆ ವೇಳೆ ಸರ್ವಪಕ್ಷಗಳ ವಾದ ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿ ಮುಂದಿನ ಆದೇಶದವರೆಗೆ ಎಎಸ್ಐ ಸಮೀಕ್ಷೆಗೆ ತಡೆ ನೀಡಿತ್ತು.
ಅಂಜುಮನ್ ಇಂಜಾಮಿಯಾ ಮಸೀದಿ ಸಮಿತಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರೀತಿಕರ್ ದಿವಾಕರ್ ವಿಚಾರಣೆ ನಡೆಸಿದ್ದರು.
ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ಮಾ ಶೃಂಗಾರ್ ಗೌರಿ-ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಿವಾದಿತ ಭಾಗವನ್ನು ಹೊರತುಪಡಿಸಿ ಇಡೀ ಜ್ಞಾನವಾಪಿ ಸಂಕೀರ್ಣದ ಪುರಾತತ್ವ ತನಿಖೆಗೆ ಆದೇಶಿಸಲಾಯಿತು. ಆಗಸ್ಟ್ 4ರೊಳಗೆ ವರದಿ ಸಲ್ಲಿಸುವಂತೆ ಎಎಸ್ಐಗೆ ನ್ಯಾಯಾಲಯ ಆದೇಶಿಸಿತ್ತು. ಆದರೆ, ಈ ಪ್ರಕರಣದಲ್ಲಿ ಅಂಜುಮನ್ ಇಂಝಾಮಿಯಾ ಮಸೀದಿ ಸಮಿತಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಎಎಸ್ಐ ಸಮೀಕ್ಷೆಗೆ ತಡೆ ನೀಡುವಂತೆ ಒತ್ತಾಯಿಸಿದೆ. ಈ ವಿಚಾರದಲ್ಲಿ ಇಂದು ನಿರ್ಧಾರ ಹೊರಬೀಳಲಿದೆ.