News Karnataka Kannada
Monday, May 13 2024
ಹರ್ಯಾಣ

ಕಾರ್ಮಿಕರ ಮೇಲೆ ಹರಿದ ಟ್ರಕ್: 3 ಜನ ಸಾವು, 11 ಮಂದಿಗೆ ಗಾಯ

Four killed in accident between truck and car
Photo Credit :

ಚಂಡೀಗಢ: ಹರಿಯಾಣದ ಜಜ್ಜರ್ ಬಳಿ ಕುಂಡ್ಲಿ-ಮನೇಸರ್-ಪಲ್ವಾಲ್(ಕೆಎಂಪಿ) ಎಕ್ಸ್‌ ಪ್ರೆಸ್‌ ವೇ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 11 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ 10 ಮಂದಿಯನ್ನು ಚಿಕಿತ್ಸೆಗಾಗಿ ರೋಹ್ಟಕ್‌ ನ ಪೋಸ್ಟ್ ಗ್ರಾಜುಯೇಟ್ ಇನ್‌ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ ಗೆ(ಪಿಜಿಐಎಂಎಸ್) ದಾಖಲಿಸಲಾಗಿದೆ.

ಒಬ್ಬರನ್ನು ಚಿಕಿತ್ಸೆಗಾಗಿ ಬಹದ್ದೂರ್‌ ಗಢ್‌ ನ ಟ್ರಾಮಾ ಸೆಂಟರ್‌ ಗೆ ದಾಖಲಿಸಲಾಗಿದೆ. ಮೃತಪಟ್ಟ ಮತ್ತು ಗಾಯಗೊಂಡ ಕಾರ್ಮಿಕರೆಲ್ಲರೂ ಕೆಎಂಪಿ ಎಕ್ಸ್‌ ಪ್ರೆಸ್‌ ವೇ ಯಲ್ಲಿ ದುರಸ್ತಿ ಕೆಲಸ ಮಾಡುವವರಾಗಿದ್ದಾರೆ. ಕೆಲಸ ಮುಗಿಸಿದ ನಂತರ ದಣಿದಿದ್ದ ಕಾರ್ಮಿಕರು ರಸ್ತೆ ಬದಿ ಮಲಗಿದ್ದರು. ಅತೀ ವೇಗದಲ್ಲಿ ಬಂದ ಲಾರಿಯೊಂದು ನಿದ್ರಿಸುತ್ತಿದ್ದ ಕಾರ್ಮಿಕರಿಗೆ ಮೇಲೆ ಹರಿದು ದುರಂತ ಸಂಭವಿಸಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಹದ್ದೂರ್‌ಗಢ ಜನರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು