News Karnataka Kannada
Friday, May 03 2024
ಹರ್ಯಾಣ

ಸಿಂಘು ಗಡಿಯಲ್ಲಿ ಯುವಕನ ಬರ್ಬರ ಹತ್ಯೆ: ಕೈ-ಕಾಲು ಕತ್ತರಿಸಿ, ಬ್ಯಾರಿಕೇಡ್ ಗೆ ಕಟ್ಟಿದ್ದ ದುಷ್ಕರ್ಮಿಗಳು

Murder Girl 16082021
Photo Credit :

ದೆಹಲಿ-ಹರಿಯಾಣದ ಸಿಂಗು ಗಡಿಯಲ್ಲಿ 35 ವರ್ಷದ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ಬೆಳಗ್ಗೆ ಆಂದೋಲನದ ಪ್ರಮುಖ ವೇದಿಕೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ದೇಹ ಪತ್ತೆಯಾಗಿದೆ.

ಶುಕ್ರವಾರ ಬೆಳಗ್ಗೆ 5 ಗಂಟೆ ಸುಮಾರಿಗೆ, ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ (ಕುಂಡ್ಲಿ, ಸೋನಿಪತ್) ಕೈಗಳು, ಕಾಲುಗಳನ್ನು ಕತ್ತರಿಸಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ಡಿಎಸ್ ಪಿ ಹನ್ಸ್ ರಾಜ್ ಹೇಳಿದ್ದಾರೆ.

ಕೊಲೆಯಾದ ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿ ಯಾರು ಎಂದು ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಆರಂಭಿಕವಾಗಿ ಪೊಲೀಸರು ಸ್ಥಳಕ್ಕೆ ಪ್ರವೇಶಿಸಲು ಪ್ರತಿಭಟನಾನಿರತ ರೈತರು ಅಡ್ಡಿಪಡಿಸಿದರೂ, ತದನಂತರ ಸ್ಥಳಪರಿಶೀಲನೆಗೆ ಅವಕಾಶ ನೀಡಿದರು. ಶವವನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಯಿತು ಎಂದು ವರದಿಗಳು ತಿಳಿಸಿವೆ.

“ಸಂಯುಕ್ತ ಕಿಸಾನ್ ಮೋರ್ಚಾ ಈ ಪ್ರಕರಣಕ್ಕೂ ತಮಗೂ ಏನೂ ಸಂಬಂಧವಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಹರಿಯಾಣ ಸರ್ಕಾರದೊಂದಿಗೆ ಪೂರ್ಣ ರೀತಿಯಲ್ಲಿ ಸಹಕರಿಸುವುದಾಗಿ” ಹೇಳಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು