ಜಿಂದ್: ಹರಿಯಾಣದ ಜಿಂದ್ ಜಿಲ್ಲೆಯ ನರ್ವಾಣ ಪಟ್ಟಣ ಸಮೀಪದ ಜನವಾಲ ಗ್ರಾಮದ ಮೈದಾನವೊಂದರಲ್ಲಿ ಸೇನೆಯ ಹೆಲಿಕಾಪ್ಟರ್ವೊಂದು ಭಾನುವಾರ ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ.
ನರ್ವಾಣ ಪಟ್ಟಣ ಸಮೀಪದ ಜನವಾಲ ಗ್ರಾಮದ ಮೈದಾನವೊಂದರಲ್ಲಿ ಇಳಿದಿರುವ ಹೆಲಿಕಾಪ್ಟರ್ನಲ್ಲಿ ಸೇನೆಯ ನಾಲ್ವರು ಸಿಬ್ಬಂದಿ ಇದ್ದರು.ಎಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇತ್ತೀಚೆಗೆ ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಮೂರು ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 14 ಮಂದಿ ಮೃತಪಟ್ಟಿದ್ದರು.