ಹರಿಯಾಣ: ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿಯ ರೈತರ ಪ್ರತಿಭಟನಾ ಸ್ಥಳದ ಬಳಿ ಒಂದು ಕೈ ಕತ್ತರಿಸಿದ 35 ವರ್ಷದ ವ್ಯಕ್ತಿಯ ಶವ ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತನನ್ನು ಲಖಬೀರ್ ಸಿಂಗ್ ಎಂದು ಗುರುತಿಸಲಾಗಿದೆ.
ಸಿಂಗು ಗಡಿಯ ಹತ್ತಿರ ಪ್ರತಿಭಟನಾ ಸ್ಥಳದ ಬಳಿ ಲೋಹದ ತಡೆಗೋಡೆಗೆ ಶವವನ್ನು ಕಟ್ಟಿರುವುದು ಕಂಡುಬಂದಿದೆ.” ಕುಂಡ್ಲಿ ಪೊಲೀಸ್ ಠಾಣೆಗೆ ಬೆಳಿಗ್ಗೆ 5 ಗಂಟೆಗೆ ಮಾಹಿತಿ ಸಿಕ್ಕಿತು, ರೈತರ ಪ್ರತಿಭಟನಾ ಸ್ಥಳದ ಬಳಿ ಶವ ಪತ್ತೆಯಾಗಿದೆ, ” ಎಂದು ಸೋನಿಪತ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮೃತರು ಕೇವಲ ಒಂದು ಜೋಡಿ ಶಾರ್ಟ್ಸ್ ಧರಿಸಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.ನಂತರ ಘಟನೆಗೆ ಸಂಬಂಧಿಸಿದಂತೆ ಇಬ್ಬರು ನಿಹಾಂಗ್ರನ್ನು ಪೊಲೀಸರು ಬಂಧಿಸಿದರು.
ಹರಿಯಾಣದ ರೈತರ ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ವ್ಯಕ್ತಿಯ ಶವ ಪತ್ತೆ; ಇಬ್ಬರ ಬಂಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.