News Karnataka Kannada
Friday, May 03 2024
ಹರ್ಯಾಣ

ಹರ್ಯಾಣ: ಗುಡ್ಡ ಕುಸಿದ ಪರಿಣಾಮ ನಾಲ್ವರು ಹುಡುಗಿಯರು ಸಾವು, ಒಬ್ಬರಿಗೆ ಗಾಯ

Heart attack during liver transplant
Photo Credit :

ಹರ್ಯಾಣ : ಬೃಹತ್​ ಮಣ್ಣಿನ ಗುಡ್ಡ ಕುಸಿದು ನಾಲ್ವರು ಹುಡುಗಿಯರು ಜೀವಂತ ಸಮಾಧಿಯಾದ ದುರ್ಘಟನೆ ಹರ್ಯಾಣ(Haryana)ದ ನುಹ್​ ಜಿಲ್ಲೆಯ  ಹಳ್ಳಿಯೊಂದರಲ್ಲಿ ನಡೆದಿದೆ.

ಇನ್ನೊಬ್ಬಳು ಹುಡುಗಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಎಲ್ಲ ಹುಡುಗಿಯರೂ ತಾವೂರು ಉಪವಿಭಾಗದ ಕಂಗರ್ಕ ಗ್ರಾಮದವರು. ಇವರೆಲ್ಲ ತಮ್ಮ ಮನೆಗಳ ಕೆಲಸಕ್ಕೆ ಮಣ್ಣು ತರಲೆಂದು ಹೋಗಿದ್ದರು. ಆದರೆ ಮಣ್ಣುಗುಡ್ಡದ ದೊಡ್ಡದೊಂದು ತುಂಡು ಅವರ ಮೈಮೇಲೆ ಬಿದ್ದಿದೆ. ಸ್ಥಳೀಯರೇ ಹುಡುಗಿಯರನ್ನು ಮಣ್ಣಿನಡಿಯಿಂದ ಹೊರಗೆ ತೆಗೆದಿದ್ದಾರೆ. ಆದರೆ ಒಬ್ಬಳು ಮಾತ್ರ ಬದುಕಿದ್ದು ಗಾಯಗೊಂಡಿದ್ದಾರೆ.

ವಕೀಲಾ (19), ತಸ್ಲೀಮಾ (11), ಜನಿಸ್ಟಾ (17) ಮತ್ತು ಗುಲಫ್ಶಾ (9) ಎಂಬುವರು ಮೃತರಾಗಿದ್ದು, ಸೋಫಿಯಾ (8) ಗಾಯಗೊಂಡಿದ್ದಾರೆ. ನಾಲ್ವರೂ ಬಾಲಕಿಯರು ಉಸಿರುಕಟ್ಟಿಯೇ ಸತ್ತಿದ್ದಾರೆ. ಸೋಫಿಯಾ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಜಿಲ್ಲಾಡಳಿತ ಮತ್ತು ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ಅಲ್ಲಿ ಮಣ್ಣಿನ ಗುಡ್ಡ ಕುಸಿದಿದ್ದು ಹೇಗೆಂಬ ತನಿಖೆ ನಡೆಸಲಾಗುತ್ತಿದೆ. ಸದ್ಯ ಮೃತ ಹುಡುಗಿಯರ ಮನೆಯವರು ಯಾವುದೇ ದೂರು ನೀಡಿಲ್ಲ. ಹೀಗಾಗಿ ಅದನ್ನೊಂದು ಆಯಕ್ಸಿಡೆಂಟ್​ ಎಂದೇ ಪರಿಗಣಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಏನೋ ಕೆಲಸಕ್ಕೆಂದು ಮಣ್ಣು ಬೇಕಿತ್ತು. ಹಾಗಾಗಿ ಹುಡುಗಿಯರೆಲ್ಲ ಒಟ್ಟಾಗಿ ಅದನ್ನು ತರಲೆಂದು ಹೋಗಿದ್ದರು. ಅವರು ಅಗೆಯುತ್ತಿದ್ದಂತೆ ಮಣ್ಣಿನ ಗುಡ್ಡದ ಒಂದು ಬದಿ ಕುಸಿದು ಅವರ ಮೈಮೇಲೆ ಬಿತ್ತು. ಅದರಲ್ಲಿ ಸೋಫಿಯಾ ಎಂಬಾಕೆ ಇದ್ದುದರಲ್ಲೇ ತಪ್ಪಿಸಿಕೊಂಡು ಕಷ್ಟಪಟ್ಟು ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಕೂಡಲೇ ಸಮೀಪಿದಲ್ಲಿ ಇದ್ದವರೆಲ್ಲ ಹೋಗಿ ಎಲ್ಲರನ್ನೂ ಹೊರಗೆಳೆದಿದ್ದಾರೆ. ಇದು ಒಂದು ಆಯಕ್ಸಿಡೆಂಟ್ ಆಗಿದ್ದು ಯಾರನ್ನೂ ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಗ್ರಾಮದ ಸರ್​ಪಂಚ್​ ಮುಷ್ಟ್ಕಿಮ್ ತಿಳಿಸಿದ್ದಾರೆ. ಗಾಯಗೊಂಡ ಬಾಲಕಿಯ ಆರೋಗ್ಯ ಸ್ಥಿರವಾಗಿದ್ದು, ಉಳಿದ ನಾಲ್ವರ ಶವವನ್ನು ಪೋಸ್ಟ್​ಮಾರ್ಟಮ್​ಗೆ ಕಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು