ಹರ್ಯಾಣ: ಗುರುಗ್ರಾಮದ ಸೈಬರ್ ಸಿಟಿಯ ಮದನ್ಪುರಿಯಲ್ಲಿರುವ ಸ್ಮಶಾನದ ಗೇಟ್ನ ಹಿಂದಿನ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಇದರಲ್ಲಿ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ ತಂಡ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅವಶೇಷಗಳನ್ನು ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದರು.
ಪೊಲೀಸರ ಪ್ರಕಾರ, ಅರ್ಜುನ್ ನಗರ ರಸ್ತೆ ಸಂಖ್ಯೆ 8 ರಲ್ಲಿ ಸಂಜೆ 5.30 ರಿಂದ 6 ರ ನಡುವೆ ಈ ಘಟನೆ ನಡೆದಿದೆ. ಇಲ್ಲಿ ಸ್ಮಶಾನದ 18 ಅಡಿ ಎತ್ತರದ ಗೋಡೆ ಇದ್ದಕ್ಕಿದ್ದಂತೆ ಕುಸಿದಿದೆ. ಗೋಡೆಯ ಪಕ್ಕದಲ್ಲಿ ಕುಳಿತಿದ್ದ ಜನರು ಅವಶೇಷಗಳ ಅಡಿಯಲ್ಲಿ ಹೂತುಹೋದರು. ಅಕ್ಕಪಕ್ಕದ ಜನರು ಅವಶೇಷಗಳನ್ನು ತೆಗೆಯುವ ಪ್ರಯತ್ನ ನಡೆಸಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಜನರನ್ನು ಕೂಡಲೇ ರಕ್ಷಿಸಿ ಗುರುಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ದೇವಿ ದಯಾಳ್ (72), ಕೃಷ್ಣ ಕುಮಾರ್ (52), ಮನೋಜ್ (35) ಮತ್ತು ಬಾಲಕಿ ಖುಷ್ಬೂ (10) ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.
#WATCH | Haryana: Four people, including a child, died when the walls of a crematorium collapsed on them in Arjun Nagar, Gurugram today. Their postmortem is being done. Police investigation is underway and further action will be taken. pic.twitter.com/5ezomHRd3K
— ANI (@ANI) April 20, 2024