ಗುರುಗ್ರಾಮ: ಇಸ್ಲಾಂ ವಿರುದ್ಧ ಮಾಡಿದ್ದ ಟ್ವೀಟ್ಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಹರ್ಯಾಣ ಘಟಕದ ಮಾಹಿತಿ ತಂತ್ರಜ್ಞಾನದ ಮುಖ್ಯಸ್ಥ ಅರುಣ್ ಯಾದವ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ.
ಅರುಣ್ ಯಾದವ್ ಅವರನ್ನು ಪದಚ್ಯುತಿಗೊಳಿಸಿರುವ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಒ.ಪಿ.ಧನ್ಕರ್ ಹೇಳಿಕೆ ನೀಡಿದ್ದಾರೆ.
ಯಾದವ್ ಅವರು 2017ರಲ್ಲಿ ಮಾಡಿದ್ದ ಟ್ವೀಟ್ ಈಚೆಗೆ ಸಾಮಾಜಿಕ ಜಾಲತಾಣ ದಲ್ಲಿ ಸಾಕಷ್ಟು ಹರಿದಾಡಿತ್ತು. ಇದರ ಹಿಂದೆಯೇ ಅವರನ್ನು ಬಂಧಿಸಬೇಕು ಎಂಬ ಆಗ್ರಹವು ವ್ಯಾಪಕವಾಗಿ ಕೇಳಿಬಂದಿತ್ತು. ಆದರೆ, ಯಾದವ್ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ.