ಹರಿಯಾಣ: ಸೋನೆಪತ್ನಲ್ಲಿ ಓರ್ವ ಯುವಕನನ್ನು ಸ್ನೇಹಿತರೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವಕ ದೆಹಲಿಯ ಖ್ಯಾತ ಎಸಿಪಿ ಪುತ್ರ ಎಂದು ತಿಳಿದುಬಂದಿದೆ.
ಕೊಲೆಯಾದ ಯುವಕ ಲಕ್ಷ್ಯ ಚೌಹಾಣ್ (24) ನನ್ನು, ಸ್ನೇಹಿತರು ಮದುವೆಗೆಂದು ಕೆರದುಕೊಂಡು ಹೋಗಿ ಈ ಕೃತ್ಯವೆಸಗಿದ್ದಾರೆ. ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್ಪಾಲ್ ಸಿಂಗ್ ಅವರ ಪುತ್ರನಾದ ಚೌಹಾಣ್ ತೀಸ್ ಹಜಾರಿ ನ್ಯಾಯಾಲಯದ ವಕೀಲರಾಗಿದ್ದರು. ಲಕ್ಷ್ಯ ಸ್ನೇಹಿತರಾದ, ವಿಕಾಸ್ ಭಾರದ್ವಾಜ್ ಮತ್ತು ಸಹಚರ ಅಭಿಷೇಕ್ ಕಾಲುವೆಗೆ ತಳ್ಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕೊಲೆ ನಡೆಯಲು, ಮೃತ ಯುವಕ ಸಾಲ ಹಿಂದಿರುಗಿಸುವಂತೆ ಕೇಳಿದ್ದೆ ಕಾರಣ ಎಂದು ತಿಳಿದುಬಂದಿದೆ. ಸೋಮವಾರದಂದು ಲಕ್ಷ್ಯ ಅವರು ತಮ್ಮ ಸ್ನೇಹಿತರೊಂದಿಗೆ ಸೋನೆಪತ್ನಲ್ಲಿ ಮದುವೆಗೆಂದು ಅವರ ಸ್ನೇಹಿತರ ಜೊತೆ ಹೋಗಿದ್ದರು. ಆದರೆ ಅವರು ಮನೆಗೆ ಬಾರದ ಕಾರಣ ತಂದೆ ಯಶ್ಪಾಲ್ ಸಿಂಗ್ ಅವರು ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ದೂರು ದಾಖಲಿಸಿಕೊಂಡು ಶೋಧ ಕಾರ್ಯ ನಡೆಸಿದಾಗ ಚೌಹನ್ ಅವರ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಅಭೀಷೆಕ್ನನ್ನು ಪೊಲೀಸರು ಬಂಧಿಸಿದ್ದಾರೆ. ಪರಾರಿಯಾಗಿರುವ ಭಾರದ್ವಾಜ್ಗಾಗಿ ಪೊಲೀಸರು ಹುಟುಕಾಟ ನಡೆಸಲಾಗುತ್ತಿದೆ.
ಮೊಬೈಲ್ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…
ಸೋಷಿಯಲ್ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್ ಮಾಡುತ್ತ, ಹಲ್ಚಲ್ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…
ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್ ಲೀಕ್ ಆಗಿ ರಸ್ತೆಯ…
ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…
ಇಂದು ರಾಜ್ಯದೆಲ್ಲಡೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…