ಚಂಡೀಗಢ: ಬಿಜೆಪಿಯ ೮ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಮೂಲಕ ರಾಜ್ಯದ ಹೊಸ ಮುಖ್ಯಮಂತ್ರಿ ನಯಾಬ್ ಸಿಂಗ್ ತಮ್ಮ ಸಚಿವ ಸಂಪುಟ ವಿಸ್ತರಿಸಿಕೊಂಡಿದ್ದಾರೆ. ಇದರೊಂದಿಗೆ ಅವರ ಸಂಪುಟದಲ್ಲಿ ಸಚಿವರ ಸಂಖ್ಯೆ ೧೩ ಆಗಿದೆ.
ಮನೋಹರ್ ಲಾಲ್ ಖಟ್ಟರ್ ರಾಜೀನಾಮೆಯ ನಂತರ ನಯಾಬ್ ಸಿಂಗ್ರನ್ನು ಬಿಜೆಪಿ ಮುಖ್ಯಮಂತ್ರಿಯಾಗಿ ಆರಿಸಿದ್ದು, ಬಹುಮತ ಸಾಬೀತುಪಡಿಸುವ ಮೂಲಕ ಅವರು ರಾಜ್ಯದ ನೂತನ ಸಿಎಂ ಆಗಿ ಅಧಿಕಾರಕ್ಕೇರಿದರು.
ಶಾಸಕರಾಗಿದ್ದ ಕಮಲ್ ಗುಪ್ತಾ, ಸೀಮಾ ತ್ರಿಖಾ, ಮಹಿಪಾಲ್ ಧಂಡಾ, ಅಸೀಮ್ ಗೋಯಲ್, ಅಭಯ್ ಸಿಂಗ್ ಯಾದವ್, ಸುಭಾಷ್ ಸುಧಾ, ವಿಶಂಭರ್ ಸಿಂಗ್ ವಾಲ್ಮೀಕಿ ಹಾಗೂ ಸಂಜಯ್ ಸಿಂಗ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇದರೊಂದಿಗೆ ಸಂಪುಟದಲ್ಲಿ ಸಚಿವರ ಸಂಖ್ಯೆ ೧೩ಕ್ಕೆ ಏರಿದೆ.