News Karnataka Kannada
Saturday, April 27 2024
ಹರ್ಯಾಣ

ಕುಸ್ತಿ ಪಟುಗಳ ಪ್ರತಿಭಟನೆಗೆ ರಾಹುಲ್ ಗಾಂಧಿ ಸಾಥ್

ಝಜ್ಜರ್ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಪ್ರಮುಖ ಖುಸ್ತಿ ಪಟುಗಳನ್ನು ಭೇಟಿ ಆಗಿದ್ದಾರೆ. ಒಲಿಂಪಿಕ್​ನಲ್ಲಿ ಕಂಚು ವಿಜೇತ ಬಜರಂಗ್ ಪುನಿಯಾ ಸೇರಿ ಹಲವರನ್ನು ಭೇಟಿಯಾಗಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.
Photo Credit : News Kannada

ಹರಿಯಾಣ: ಝಜ್ಜರ್ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಪ್ರಮುಖ ಖುಸ್ತಿ ಪಟುಗಳನ್ನು ಭೇಟಿ ಆಗಿದ್ದಾರೆ. ಒಲಿಂಪಿಕ್​ನಲ್ಲಿ ಕಂಚು ವಿಜೇತ ಬಜರಂಗ್ ಪುನಿಯಾ ಸೇರಿ ಹಲವರನ್ನು ಭೇಟಿಯಾಗಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

ಕುಸ್ತಿ ಪಟುಗಳಾದ ದೀಪಕ್ ಪುನಿಯಾ, ಬಜರಂಗ್ ಪುನಿಯಾ ಸೇರಿ ಹಲವರನ್ನು ರಾಹುಲ್ ಗಾಂಧಿ ಭೇಟಿಯಾಗಿರುವ ಫೋಟೋ ವೈರಲ್ ಆಗಿದೆ. ಡಬ್ಲ್ಯೂಎಫ್​ಐ ನಲ್ಲಿ ಇತ್ತೀಚೆಗೆ ಚುನಾವಣೆ ನಡೆದಿತ್ತು. ಈ ಎಲೆಕ್ಷನ್​ನಲ್ಲಿ ಹಿಂದಿನ ಕಳಂಕಿತ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಆಯ್ಕೆ ಆಯ್ಕೆ ಆಗಿದ್ದಾರೆ. ಬ್ರಿಜ್ ಭೂಷಣ್​​ ವಿರುದ್ಧ ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಇದೆ. ಅವರ ತಲೆದಂಡ ಬಳಿಕ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ ಆಗಿರೋದು, ಕುಸ್ತಿಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ. ಸದ್ಯ ಭಾರತ ಸರ್ಕಾರ WFIಗೆ ಆಯ್ಕೆ ಆಗಿರುವ ನೂತನ ಸದಸ್ಯರನ್ನು ಅಮಾನತಿನಲ್ಲಿಟ್ಟಿದೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ದೇಶದ ಕುಸ್ತಿಪುಟುಗಳು ಭಾರತ ಸರ್ಕಾರ ನೀಡಿರುವ ಪ್ರಶಸ್ತಿಗಳನ್ನು ವಾಪಸ್ ಮಾಡುತ್ತಿದ್ದಾರೆ. ಭಜರಂಗ್ ಪುನಿಯಾ, ಕಾಮನ್​ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ವಿಜೇತ ವಿನೇಶ್ ಪೋಗಾಟ್, ಒಲಿಂಪಿಕ್​ನಲ್ಲಿ ಕಂಚು ಗೆದ್ದಿರುವ ಸಾಕ್ಷಿ ಮಲಿಕ್ ಸೇರಿ ಅನೇಕ ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ಧ ಆರೋಪ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು