ಚಂಡೀಗಢ: ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ಸ್ಕೂಲ್ ಬಸ್ ಪಲ್ಟಿಯಾಗಿ ಆರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 15 ಮಕ್ಕಳು ಗಾಯಗೊಂಡಿದ್ದಾರೆ.
ಜಿಲ್ಲೆಯಲ್ಲಿರುವ ಜಿಎಲ್ ಪಬ್ಲಿಕ್ ಶಾಲೆಯಲ್ಲಿ ನಾಲ್ಕರಿಂದ 10ನೇ ತರಗತಿವರೆಗೆ ಓದುತ್ತಿರುವ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಮರಕ್ಕೆ ಡಿಕ್ಕಿಯಾಗಿ, ಮಗುಚಿ ಬಿದ್ದಿದೆ. ಮದ್ಯಪಾನ ಮಾಡಿದ್ದ ಬಸ್ ಚಾಲಕನು ನಿಯಂತ್ರಣ ತಪ್ಪಿದಾಗ ಬಸ್ನಿಂದ ಜಿಗಿದಿದ್ದಾನೆ. ಇದಾದ ಬಳಿಕ ಆರು ವಿದ್ಯಾರ್ಥಿಗಳು ಮೃತಪಟ್ಟರೆ, 17 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದ 14 ವಿದ್ಯಾರ್ಥಿಗಳು ಡಿಸ್ಚಾರ್ಜ್ ಆಗಿದ್ದರೆ, ಇನ್ನೂ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಇನ್ನು, ರಂಜಾನ್ ರಜೆ ಇದ್ದರೂ ತರಗತಿಗಳಿಗೆ ರಜೆ ಘೋಷಿಸದ ಕಾರಣ ಶಾಲೆ ಪ್ರಾಂಶುಪಾಲ, ಕಾರ್ಯದರ್ಶಿ ಹಾಗೂ ಪಾನಮತ್ತ ವಾಹನ ಚಾಲಕನನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲ, ಆರು ವರ್ಷಗಳ ಹಿಂದೆಯೇ ಸ್ಕೂಲ್ ಬಸ್ನ ಫಿಟ್ನೆಸ್ ಸರ್ಟಿಫಿಕೇಟ್ನ ಅವಧಿ ಮುಗಿದಿದೆ ಎಂದು ಶಾಲೆಯ ದಾಖಲೆಗಳಿಂದ ತಿಳಿದುಬಂದಿದೆ. ಇದಕ್ಕಾಗಿ ರಸ್ತೆ ಸಾರಿಗೆ ಅಧಿಕಾರಿಯೊಬ್ಬನನ್ನು ಅಮಾನತುಗೊಳಿಸಲಾಗಿದೆ.
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…