News Karnataka Kannada
Monday, May 06 2024
ಹರ್ಯಾಣ

ನುಹ್‌ ಹಿಂಸಾಚಾರ ಆರು ಮಂದಿ ಬಲಿ, 116 ಗಲಭೆಕೋರರ ಸೆರೆ

Six dead, 116 arrested in Nuh violence: Haryana CM
Photo Credit : News Kannada

ಚಂಡೀಗಢ: ನುಹ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಆರು ಜನರು ಸಾವನ್ನಪ್ಪಿದ್ದು, ದೊಂಬಿ, ಗಲಭೆ ಸೃಷ್ಟಿಸಿದ 116 ಮಂದಿಯನ್ನು ಬಂಧಿಸಲಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಬುಧವಾರ ಹೇಳಿದ್ದಾರೆ.

ಬಲಿಯಾದವರ ಪೈಕಿ ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಮತ್ತು ನಾಲ್ವರು ನಾಗರಿಕರು ಸೇರಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಹರಿಯಾಣ ಪೊಲೀಸರ 30 ಕಂಪನಿಗಳು ಮತ್ತು ಕೇಂದ್ರೀಯ ಅರೆಸೇನಾ ಪಡೆಗಳ 20 ಕಂಪನಿಗಳನ್ನು ಗಲಭೆ ಪೀಡಿತ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಸಿಎಂ ವಿವರಿಸಿದ್ದಾರೆ.

14 ಸ್ಥಳಗಳಲ್ಲಿ ಮತ್ತೆ ಕೋಮು ಸಂಘರ್ಷಗಳು ನಡೆದಿವೆ. “ಹಿಂಸಾಚಾರದ ನೈಜ ಸೂತ್ರಧಾರಿಗಳನ್ನು ಶೀಘ್ರದಲ್ಲಿಯೇ ಸೆರೆಹಿಡಿಯಲಾಗುವುದು ಎಂದು ಗೃಹಸಚಿವ ಅನಿಲ್‌ ವಿಜ್‌ ತಿಳಿಸಿದ್ದಾರೆ. ಹರಿಯಾಣ ಪೊಲೀಸ್ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಿದ್ದೇವೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇಡುತ್ತಿದ್ದೇವೆ. ಇಲ್ಲಿಯವರೆಗೆ ನಲವತ್ತೊಂದು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ನುಹ್ ಒಂದರಲ್ಲೇ 116 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂಸಾಚಾರದ ಬಗ್ಗೆ ಖಟ್ಟರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಐಎಎನ್ಎಸ್ಗೆ ತಿಳಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ‘ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆ’ ಗುಂಪೊಂದು ತಡೆದ ಬಳಿಕ ಹಿಂಸಾಚಾರ ಆರಂಭವಾಗಿದ್ದನ್ನು ಸ್ಮರಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು