ದೆಹಲಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಎಲ್ಲಿದ್ದಾರೆಂದು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕಳೆದ 28 ಗಂಟೆಯಿಂದ ಯಾರ ಸಂಪರ್ಕಕ್ಕೂ ಸಿಗದೇ ನಿಗೂಢವಾಗಿರುವ ಸೊರೇನ್ ಅವರನ್ನು ಪತ್ತೆ ಹಚ್ಚಲು ಎಲ್ಲಾ ರೀತಿಯ ಸರ್ಕಸ್ ಮಾಡಲಾಗ್ತಿದೆ. ಈ ಪ್ರಕರಣವು ಇದೀಗ ಜಾರ್ಖಂಡ್ನಲ್ಲಿ ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ಜಾರ್ಖಂಡ್ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಬುಲಾಲ್ ಮರಂಡಿ ಸೋಶಿಯಲ್ ಮೀಡಿಯಾದಲ್ಲಿ ‘ಮುಖ್ಯಮಂತ್ರಿಗಳು ಕಾಣೆಯಾಗಿದ್ದಾರೆ’ ಎಂಬ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ನಾಪತ್ತೆಯಾಗಿರುವ ಜಾರ್ಖಂಡ್ ಮುಖ್ಯಮಂತ್ರಿಗಾಗಿ ಹುಡುಕಾಟ ನಡೆಯುತ್ತಿದೆ. ಯಾರಾದರೂ ನೋಡಿದ್ದಲ್ಲಿ, ಈ ವಿಳಾಸಕ್ಕೆ ತಿಳಿಸಿ. ಸರಿಯಾದ ಮಾಹಿತಿ ನೀಡಿದರೆ 11 ಸಾವಿರ ರೂಪಾಯಿ ಬಹುಮಾನ ನಿಡುವುದಾಗಿ ಘೋಷಣೆ ಮಾಡಿ ಗೇಲಿ ಮಾಡಿದೆ.
ಅಂದ್ಹಾಗೆ ಜಾರ್ಖಂಡ್ ಮುಖ್ಯಮಂತ್ರಿ ಕಳೆದ 28 ಗಂಟೆಗಳಿಂದ ನಾಪತ್ತೆ ಆಗಿದ್ದಾರೆ. ದೆಹಲಿಯ ನಿವಾಸದಿಂದ ನಾಪತ್ತೆಯಾಗಿರುವ ಸಿಎಂ ಹೇಮಂತ್ ಸೊರೇನ್ ಎಲ್ಲಿದ್ದಾರೆಂದು ಗೊತ್ತಿಲ್ಲ. ಇತ್ತ ದೆಹಲಿ ನಿವಾಸದ ಮೇಲೆ ದಾಳಿ ಮಾಡಿರುವ ಇಡಿ ಅಧಿಕಾರಿಗಳು 36 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.