ಈ ಶೈಕ್ಷಣಿಕ ವರ್ಷದಿಂದ ಹಿಮಾಚಲ ಪ್ರದೇಶದ 9, 10, 11 ಮತ್ತು 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಬೋಧಿಸಲಾಗುವುದು ಎಂದು ಶಿಕ್ಷಣ ಸಚಿವರ ತಿಳಿಸಿದ್ದಾರೆ.
ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ಶಾಲೆಗಳಲ್ಲಿ ಗೀತೆಯನ್ನು ಕಲಿಸಲಾಗುತ್ತದೆ. ಇದಲ್ಲದೆ, III ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಸ್ಕೃತವನ್ನು ಪರಿಚಯಿಸಲಾಗುವುದು ಎಂದು ಸಚಿವ ಗೋವಿಂದ್ ಸಿಂಗ್ ಠಾಕೂರ್ ಹೇಳಿದ್ದಾರೆ
ಈ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಕೃತಿಯ ಬಗ್ಗೆ ಕಲಿಸಲು ಹಾಗೂ ಅವರಿಗೆ ನೈತಿಕ ಶಕ್ತಿ ತುಂಬಲು ಸಹಾಯ ಮಾಡುತ್ತದೆ ಎಂದು ಸಚಿವರು ಪ್ರತಿಪಾದಿಸಿದರು.
ಇನ್ನು ಗುಜರಾತ್ ಸರಕಾರ ಕೂಡ 2022-23ರ ಶೈಕ್ಷಣಿಕ ವರ್ಷದಿಂದ 6 ರಿಂದ 12 ನೇ ತರಗತಿಗಳಿಗೆ ಭಗವದ್ಗೀತೆ ಶಾಲಾ ಪಠ್ಯಕ್ರಮದ ಭಾಗವಾಗಲಿದೆ ಎಂದು ಹೇಳಿತ್ತು.
ಕರ್ನಾಟಕದಲ್ಲಿ ಕೂಡ ರಾಜ್ಯ ಸರಕಾರ ಶಾಲೆಗಳಲ್ಲಿ ನೈತಿಕ ಶಿಕ್ಷಣದ ಭಾಗವಾಗಿ ಗೀತಾವನ್ನು ಪರಿಚಯಿಸುವ ಕುರಿತು ಚಿಂತನೆ ನಡೆಸುತ್ತಿದೆ.