ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ.
ಈ ದುರ್ಘಟನೆಯಲ್ಲಿ ಕಲ್ಲುಬಂಡೆ ಮತ್ತು ಮಣ್ಣಿನ ಅವಶೇಷಗಳಡಿ ಈಗಲೂ 10ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರಂತದಲ್ಲಿ 13 ಜನರನ್ನು ರಕ್ಷಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ 40 ಪ್ರಯಾಣಿಕರೊಂದಿಗೆ ಕಿನ್ನೌರ್ನ ರೆಕಾಂಗ್ ಪಿಯೊದಿಂದ ಶಿಮ್ಲಾಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಕಡಿದಾದ ಮಾರ್ಗದಲ್ಲಿ ಭೂಕುಸಿತ ಸಂಭವಿಸಿತು.
ಕಲ್ಲುಬಂಡೆಗಳ ಮತ್ತು ಮಣ್ಣಿ ಅವಶೇಷಗಳಡಿ ಬಸ್ ಸೇರಿದಂತೆ ಹಲವು ವಾಹನಗಳು ಸಿಲುಕಿದ್ದವು. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಈಗಲೂ ಕಲ್ಲುಗಳು ಉರುಳುತ್ತಿದ್ದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಸ್ಥಳೀಯ ರಕ್ಷಣಾ ದಳಗಳು ಬದುಕುಳಿದಿರಬಹುದಾದ ಜನರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿಸಿದೆ.