ಹಿಮಾಚಲ ಪ್ರದೇಶ: ಕಾಂಗ್ರೆಸ್ ನ ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, 6 ಶಾಸಕರ ಸದಸ್ಯತ್ವವನ್ನು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅಮಾನತು ಗೊಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಗೊಂದಲ ಮುಂದುವರಿದಿದೆ. ಇದಕ್ಕೆ ಸರಿಯಾದ ಪರಿಹಾರ ಇದುವರುಗೂ ಕಂಡುಬಂದಿಲ್ಲ ಆದರೆ ವೀಕ್ಷಕರ ಹಲವು ಪ್ರಯತ್ನಗಳ ಮೇರೆಗೆ ವಿಕ್ರಮಾದಿತ್ಯ ಸಿಂಗ್ ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.
ಆದರೆ 6 ಬಂಡಾಯ ಕಾಂಗ್ರೆಸ್ ಶಾಸಕರು ಚಂಡೀಗಢದಲ್ಲಿ ಬೀಡು ಬಿಟ್ಟಿದ್ದಾರೆ. ಮತ್ತೊಂದೆಡೆ, ಸಿಎಂ ಸುಖವಿಂದರ್ ಸಿಂಗ್ ಸುಖು ತಮ್ಮ ಸರ್ಕಾರ ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. ಆದರೆ ಲೋಕಸಭೆ ಚುನಾವಣೆಯ ನಂತರವೂ ಅವರ ಕುರ್ಚಿ ಸುರಕ್ಷಿತವಾಗಿ ಉಳಿಯುತ್ತದೆಯೇ ಎಂಬುದು ಪ್ರಶ್ನೆ. ಇಲ್ಲಿ ಬಂಡಾಯ ಕಾಂಗ್ರೆಸ್ ಶಾಸಕರ ಮೇಲೆ ಪಕ್ಷಾಂತರ ನಿಷೇಧ ಕಾನೂನನ್ನು ಹೇರಲಾಗಿದೆ. ಬಂಡಾಯ ಕಾಂಗ್ರೆಸ್ ಶಾಸಕರ ಜೊತೆ ವೀಕ್ಷಕರು ಮಾತುಕತೆ ನಡೆಸಿದ್ದಾರೆ. ಈ ವರದಿಯನ್ನು ಮಲ್ಲಿಕಾರ್ಜುನ ಖರ್ಗೆಯವರಿಗೆ ಸಲ್ಲಿಸಿದ್ದರು.
ಬಂಡಾಯ ಶಾಸಕರ ಜೊತೆ ಮಾತನಾಡುವಾಗ ಸಿ ಎಂ ಅವರ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹಿಮಾಚಲ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಸಂಸದೆ ಪ್ರತಿಭಾ ಸಿಂಗ್ ಅವರು ಸರ್ಕಾರ ರಚನೆಯಾದಾಗಿನಿಂದ ಅದು ಸರಿಯಾಗಿ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ. ಈ ವಿಷಯವನ್ನು ನಮ್ಮ ಹೈಕಮಾಂಡ್ಗೆ ತಿಳಿಸಿದ್ದೇವೆ ಮತ್ತು ಪರಿಹಾರವನ್ನು ಕಂಡುಕೊಳ್ಳಬೇಕೆಂದು ನಾವು ಬಯಸಿದ್ದೇವೆ. ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದೆ. ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅದರಿಂದಾಗಿ ಇಂದು ಈ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ.
ಇಂದು ಹಿಮಾಚಲ ಪ್ರದೇಶದ ಸಿಎಂ ಸುಖವಿಂದರ್ ಸಿಂಗ್ ಸುಖು ಅವರು ಶಿಮ್ಲಾದಲ್ಲಿ ಎಲ್ಲಾ ಕಾಂಗ್ರೆಸ್ ಶಾಸಕರ ಸಭೆಯನ್ನು ಕರೆದಿದ್ದಾರೆ. ಫೆಬ್ರವರಿ 27ರಂದು ನಡೆದ ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್ ನ 6 ಮಂದಿ ಶಾಸಕರು ಬಿಜೆಪಿಗೆ ಮತ ಹಾಕುವ ಮೂಲಕ ಅಡ್ಡಮತದಾನ ಮಾಡಿದ್ದರು. ಅದಾದ ಬಳಿಕ ಅವರು ಯಾರ ಕೈಗೂ ಸಿಗದೆ ಗುಪ್ತಸ್ಥಳದಲ್ಲಿದ್ದಾರೆ. ಈ ಕಾರಣ ಆ 6 ಶಾಸಕರ ಸದಸ್ಯತ್ವವನ್ನು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅಮಾನತು ಗೊಳಿಸಿದ್ದಾರೆ.