ನವದೆಹಲಿ: ಪಿಒಕೆಯನ್ನು ಭಾರತ ಆಕ್ರಮಿಸುವಾಗ ಪಾಕಿಸ್ತಾನ ಕೈಗೆ ಬಳೆ ತೊಟ್ಟಿರುವುದಿಲ್ಲ.ರಾಜನಾಥ್ ಸಿಂಗ್ಗೆ ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಟಾಂಟ್ ಕೊಟ್ಟಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತಕ್ಕೆ ಒಂದಲ್ಲ ಒಂದು ದಿನ ಸೇರುತ್ತೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಈ ರೀತಿ ಹೇಳಿಕೆ ನೀಡಿದ್ದಾರೆ.
‘ರಕ್ಷಣಾ ಸಚಿವರು ಹೀಗೆ ಹೇಳುತ್ತಿದ್ದಾರೆಂದರೆ, ಮಾಡಿ ತೋರಿಸಲಿ. ನಾವ್ಯಾಕೆ ಅವರನ್ನು ತಡೆಯೋಣ. ಆದರೆ, ಪಾಕಿಸ್ತಾನೀಯರು ಕೈಗೆ ಬಳೆ ತೊಟ್ಟಿಕೊಂಡು ಇರುವುದಿಲ್ಲ. ಆ ದೇಶದಲ್ಲಿ ಅಟಂ ಬಾಂಬ್ಗಳಿವೆ ಎಂಬುದು ಗೊತ್ತಿರಲಿ. ದುರದೃಷ್ಟ ಎಂದರೆ ಆ ಅಣು ಬಾಂಬ್ ನಮ್ಮ ಮೇಲೆಯೇ ಬೀಳುವುದು,’ ಎಂದು ಮಾಜಿ ಕಾಶ್ಮೀರ ಸಿಎಂ ಆದ ಅವರು ಹೇಳಿದ್ದಾರೆ.