ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ಬೀಳ್ಕೊಡುಗೆಗೆ ತಯಾರಿ ನಡೆಸುತ್ತಿರುವುದಾಗಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಪಾಟ್ನಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಲಾಲು ಪ್ರಸಾದ್, ಕೆಲವು ರಕ್ತ ಪರೀಕ್ಷೆಗಳಿಗಾಗಿ ದೆಹಲಿಗೆ ಹೋಗುತ್ತಿದ್ದೇನೆ ಮತ್ತು ಹಿಂದಿರುಗಿದ ನಂತರ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಐಕ್ಯತಾ ಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದರು. ನಾನು ಬಿಹಾರದ ರಾಜಕೀಯ ರಂಗಕ್ಕೆ ಮರಳಿದಾಗಿನಿಂದ ಬಿಜೆಪಿ ಚಿಂತಿತವಾಗಿದೆ. ನಾನು ಸಂಪೂರ್ಣವಾಗಿ ಫಿಟ್ ಆಗಿದ್ದೇನೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬೀಳ್ಕೊಡುಗೆಗೆ ತಯಾರಿ ನಡೆಸುತ್ತಿದ್ದೇನೆ. ಅವರು (ಬಿಜೆಪಿ) 2024 ರಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ” ಎಂದು ಲಾಲು ಪ್ರಸಾದ್ ಹೇಳಿದರು.
ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಸಿಬಿಐ ತನ್ನ ಮಗ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಚಾರ್ಜ್ಶೀಟ್ನಲ್ಲಿ ಹೆಸರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಲಾಲು ಪ್ರಸಾದ್, “ಇಂತಹ ಚಾರ್ಜ್ಶೀಟ್ಗಳಿಂದ ಹೆದರುವವರು ನಾವಲ್ಲ ಎಂದರು. ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕಳೆದ ವರ್ಷ ಡಿಸೆಂಬರ್ 5 ರಂದು ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿಗೆ ಒಳಗಾಗಿದ್ದರು.