Categories: ದೇಶ

ಬಾಹ್ಯಾಕಾಶ ಪ್ರವಾಸಕ್ಕೆ ಭಾರತದ ಮೊದಲ ವ್ಯಕ್ತಿ ಆಯ್ಕೆ

ವಾಷಿಂಗ್ಟನ್‌: ಇತ್ತೀಚಿನ ವರ್ಷಗಳಲ್ಲಿ ಜನಪ್ರಿಯತೆ ಪಡೆಯುತ್ತಿರುವ ಬಾಹ್ಯಾಕಾಶ ಪ್ರವಾಸಕ್ಕೆ ಇದೇ ಮೊದಲ ಬಾರಿ ಭಾರತೀಯ ಪ್ರವಾಸಿಯೊಬ್ಬರು ತೆರಳಲು ಆಯ್ಕೆಯಾಗಿದ್ದಾರೆ.

ಅಮೆಜಾನ್‌ ಕಂಪನಿಯ ಸಂಸ್ಥಾಪಕ ಜೆಫ್‌ ಬೆಜೋಸ್‌ ಆರಂಭಿಸಿರುವ ಬ್ಲೂ ಒರಿಜಿನ್‌ ಎನ್‌ಎಸ್‌-25 ಪ್ರವಾಸೋದ್ಯಮ ಮಿಷನ್‌ನಲ್ಲಿ ಆಂಧ್ರಪ್ರದೇಶದ ವಿಜಯವಾಡ ಮೂಲದ ಪೈಲಟ್‌ ಹಾಗೂ ಉದ್ಯಮಿ ಗೋಪಿ ತೋಟಕುರ ತೆರಳಲು ಸಜ್ಜಾಗಿದ್ದಾರೆ. ಪ್ರವಾಸದ ದಿನಾಂಕ ಇನ್ನೂ ಪ್ರಕಟವಾಗಿಲ್ಲ.

ಗೋಪಿ ತೋಟಕುರ ಅವರು ಬಾಹ್ಯಾಕಾಶ ಪ್ರವಾಸಕ್ಕೆ ತೆರಳುತ್ತಿರುವ ಮೊದಲ ಭಾರತೀಯನೆಂಬ ಖ್ಯಾತಿ ಪಡೆಯಲಿದ್ದಾರೆ. ಆದರೆ ಇವರು ಬಾಹ್ಯಾಕಾಶಕ್ಕೆ ತೆರಳಲಿರುವ 5ನೇ ಭಾರತೀಯ ಮೂಲದ ವ್ಯಕ್ತಿಯಾಗಲಿದ್ದಾರೆ.

ಈ ಹಿಂದೆ ಭಾರತೀಯ ವಾಯುಪಡೆಯ ವಿಂಗ್‌ ಕಮಾಂಡರ್‌ ರಾಕೇಶ್‌ ಶರ್ಮಾ 1984ರಲ್ಲಿ ಬಾಹ್ಯಾಕಾಶ ಯಾನ ಕೈಗೊಂಡಿದ್ದರು. ನಂತರ ನಾಸಾ ವಿಜ್ಞಾನಿಗಳಾದ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಮ್ಸ್‌ ಹಾಗೂ ರಾಜಾ ಚಾರಿ ಶಿರೀಷ ಬಂಡ್ಲ ಅವರೂ ಬಾಹ್ಯಾಕಾಶಕ್ಕೆ ತೆರಳಿದ್ದರು. ಇವರೆಲ್ಲರೂ ಬಾಹ್ಯಾಕಾಶ ವಿಜ್ಞಾನಿಗಳಾಗಿದ್ದಾರೆ ಮತ್ತು ಭಾರತೀಯ ಮೂಲದ ಅಮೆರಿಕದ ಪ್ರಜೆಗಳಾಗಿದ್ದಾರೆ.

ಬ್ಲೂ ಒರಿಜಿನ್‌ ಮಿಷನ್‌ನ ನ್ಯೂ ಶೆಫರ್ಡ್‌ ನೌಕೆ ಈಗಾಗಲೇ ಆರು ಬಾರಿ ಬಾಹ್ಯಾಕಾಶಕ್ಕೆ ಹೋಗಿ ಬಂದಿದ್ದು, 31 ಮಂದಿ ಬಾಹ್ಯಾಕಾಶ ಪ್ರವಾಸ ಕೈಗೊಂಡಿದ್ದಾರೆ. ಇದೀಗ ಏಳನೇ ಪ್ರವಾಸಕ್ಕೆ ಗೋಪಿ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ತೆರಳಲು ಇನ್ನೂ ಐದು ಮಂದಿ ಆಯ್ಕೆಯಾಗಿದ್ದಾರೆ.

ಇವರ ಜೊತೆಗೆ ತೆರಳಲು ಇನ್ನೂ ಐದು ಮಂದಿ ಆಯ್ಕೆಯಾಗಿದ್ದಾರೆ. ಭೂಮಿಯ ವಾತಾವರಣ ಮತ್ತ ಬಾಹ್ಯಾಕಾಶದ ಗಡಿ ಪ್ರದೇಶ ಎಂದು ಗುರುತಿಸಲಾಗುವ ಕರ್ಮನ್‌ ಲೈನ್‌ವರೆಗೆ ಇವರ ನೌಕೆ ಹೋಗಿ ಬರಲಿದೆ. ನ್ಯೂ ಶೆಫರ್ಡ್‌ ಸಂಪೂರ್ಣ ಮರುಬಳಕೆಯಾಗುವ ನೌಕೆಯಾಗಿದ್ದು, ಬಾಹ್ಯಾಕಾಶ ಪ್ರವಾಸೋದ್ಯಮಕ್ಕೆಂದೇ ಇದನ್ನು ಬ್ಲೂ ಒರಿಜಿನ್‌ ಕಂಪನಿ ಅಭಿವೃದ್ಧಿಪಡಿಸಿದೆ.

 

Ashitha S

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

17 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

35 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

53 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago