ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ಕುರಿತ ವಿಶ್ವಸಂಸ್ಥೆಯ ಇತ್ತೀಚಿನ ನಿರ್ಣಯಕ್ಕೆ ಭಾರತ ಗೈರು ಹಾಜರಾಗಿರುವ ಕ್ರಮವನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ ಎಂದು ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಸೋಮವಾರ ಹೇಳಿದ್ದಾರೆ.
ಇಸ್ರೇಲ್ ಈಗ ನಿರ್ದೋಷಿಯಾಗಿರುವಂತೆ ಭಾರತ ನಡೆದುಕೊಂಡಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಗಾಜಾಪಟ್ಟಿಯಲ್ಲಿ ಮಿಲಿಟರಿ ಚಟುವಟಿಕೆಗಳನ್ನು ನಿಲ್ಲಿಸುವುದು ತಕ್ಷಣದ ಅಗತ್ಯ ಎಂದು ಅವರು ಹೇಳಿದರು.
ಸಭ್ಯ ಜಗತ್ತಿನಲ್ಲಿ ಹಿಂಸೆಗೆ ಸ್ಥಾನವಿಲ್ಲ ಎಂದು ಕಾಂಗ್ರೆಸ್ ಬಲವಾಗಿ ನಂಬುತ್ತದೆ. ಅದೇ ಕಾರಣದಿಂದ ಹಮಾಸ್ನ ದಾಳಿಯ ಮರುದಿನವೇ ಆ ಘಟನೆಯನ್ನು ಖಂಡಿಸಿದ್ದೇವೆ ಎಂದು ಅವರು ಹೇಳಿದರು.
ಈ ದುರಂತವು ಗಾಜಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಸ್ರೇಲಿ ಮಿಲಿಟರಿಯ “ವಿವೇಚನಾರಹಿತ ಕಾರ್ಯಾಚರಣೆ ಪ್ರತೀಕ. ಇಸ್ರೇಲ್ ನ ಹಠಮಾರಿ ನಿಲುವಿನಿಂದಾಗಿ ಮುಗ್ಧ ಮಕ್ಕಳು, ಮಹಿಳೆಯರು ಮತ್ತು ಪುರುಷರು ಸೇರಿದಂತೆ ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.