News Karnataka Kannada
Monday, May 06 2024
ದೇಶ

ಇಂಡಿಗೋ, ಮುಂಬೈ ಏರ್​ಪೋರ್ಟ್​ಗೆ ಕೇಂದ್ರದ ನೋಟಿಸ್​

Indg
Photo Credit : News Kannada

ಮುಂಬೈ:  ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್​ವೇನಲ್ಲಿ ಕುಳಿತು ಊಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಇಂಡಿಗೋ ವಿಮಾನ ಮತ್ತು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಕೇಂದ್ರ ಸರ್ಕಾರ ನಾಗರಿಕ ವಿಮಾನಯಾನ ಸಚಿವಾಲಯ ಶೋಕಾಸ್​ ನೋಟಿಸ್​ ನೀಡಿದೆ.

ಜನವರಿ 16ರಂದು ಸಚಿವಾಲಯ ನೀಡಿರುವ ಅಧಿಕೃತ ಹೇಳಿಕೆಯಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಚಿವಾಲಯದ ಎಲ್ಲ ಅಧಿಕಾರಿಗಳ ಜತೆ ಸಭೆ ನಡೆಸಿ, ವಿಮಾನ ಸಂಚಾರ ವಿಳಂಬದಿಂದ ಉಂಟಾದ ಅವಾಂತರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಶೋಕಾಸ್​ ನೋಟಿಸ್​ ಪ್ರಕಾರ, ಇಂಡಿಗೋ ವಿಮಾನ ಮತ್ತು ಮುಂಬೈ ವಿಮಾನ ನಿಲ್ದಾಣ ಎರಡೂ ಕೂಡ ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಸೂಕ್ತವಾದ ಅನುಕೂಲ ವ್ಯವಸ್ಥೆಗಳನ್ನು ನೀಡುವಲ್ಲಿ ವಿಫಲವಾಗಿದೆ. ವಿಶ್ರಾಂತಿ ಕೊಠಡಿಗಳು ಮತ್ತು ಟರ್ಮಿನಲ್‌ನಲ್ಲಿ ಉಪಹಾರ ವ್ಯವಸ್ಥೆಯಂತಹ ಸಾಮಾನ್ಯ ಸೌಲಭ್ಯಗಳನ್ನೂ ಪ್ರಯಾಣಿಕರಿಗೆ ನೀಡಿಲ್ಲ ಎಂದು ಸಚಿವಾಲಯ ಅಸಮಾಧಾನ ಹೊರಹಾಕಿದೆ.

ವಿಮಾನ ನಿಲ್ದಾಣದ ಆಡಳಿತ ಮಂಡಳಿ ಈ ನಡೆಯಿಂದ ಪ್ರಯಾಣಿಕರು ದಣಿದಿದ್ದಲ್ಲದೆ, ಕಿರುಕುಳಕ್ಕೆ ಒಳಗಾಗಿದ್ದಾರೆ. ನಿಜಕ್ಕೂ ಇದು ಸ್ವೀಕಾರಾರ್ಹವಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ಭದ್ರತಾ ಮಾನದಂಡಗಳು ಮತ್ತು ಕಾರ್ಯಾಚರಣೆಯ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಆ ರೀತಿ ಮಾಡದೆಯೇ ವಿಮಾನ ಕಾರ್ಯಾಚರಣೆಯನ್ನು ಯೋಜಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂದು ಸಚಿವಾಲಯ ಉಲ್ಲೇಖಿಸಿದೆ.

ಹಾಗಾಗಿ ಇದರ ಬೆನ್ನಲ್ಲೇ ಕೇಂದ್ರ ವಿಮಾನಯಾನ ಸಚಿವಾಲಯ ಇಂಡಿಗೋ ವಿಮಾನ ಮತ್ತು ಏರ್​ಪೋರ್ಟ್​ ಆಡಳಿತ ಮಂಡಳಿಗೆ ನೋಟಿಸ್​ ನೀಡಿದ್ದು, ಇಂದೇ ಉತ್ತರ ನೀಡುವಂತೆ ಕೇಳಿದೆ.

ಘಟನೆ ಸಂಬಂಧ ನಿರ್ದಿಷ್ಟ ಸಮಯದಲ್ಲಿ ಉತ್ತರಗಳನ್ನು ನೀಡದಿದ್ದರೆ, ಆರ್ಥಿಕ ದಂಡ ಸೇರಿದಂತೆ ಕಠಿಣ ಕಾನೂನು ಕ್ರಮ ಜಾರಿ ಮಾಡಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು