ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸ್ಪೀಕರ್ ಚೇಂಬರ್ನಲ್ಲಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಇಂದು(ಫೆ. 28) ಅಮಾನತುಗೊಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಗದ್ದಲ ಮುಂದುವರೆದಿದೆ. ಯಾವುದೇ ಮತದಾನ ಮಾಡುವುದಾದರೆ ಕೇವಲ 10 ಶಾಸಕರು ಮಾತ್ರ ಅಲ್ಲಿರುತ್ತಾರೆ. ಇದೇ ವೇಳೆ ಯಾವುದೇ ಅಡೆತಡೆಯಿಲ್ಲದೆ ಬಜೆಟ್ ಮಂಡನೆಯಾಗಲಿದ್ದು, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗುತ್ತದೆ.
ಜೈರಾಮ್ ಠಾಕೂರ್, ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ,ಲೋಕೇಂದ್ರ ಕುಮಾರ್, ವಿನೋದ್ ಕುಮಾರ್, ಹಂಸರಾಜ್, ಜನಕ್ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದ್ರ ಶೋರಿ, ದೀಪ್ರಾಜ್, ಪುರಣ್ ಠಾಕೂರ್, ಇಂದರ್ ಸಿಂಗ್ ಗಾಂಧಿ ಮತ್ತು ದಿಲೀಪ್ ಠಾಕೂರ್ ಸೇರಿದಂತೆ ಬಿಜೆಪಿಯಿಂದ ಉಚ್ಛಾಟಿತ ಶಾಸಕರೂ ಇದ್ದಾರೆ.
ಸದನದಲ್ಲಿ ಗದ್ದಲ ಎಬ್ಬಿಸಿದಕ್ಕಾಗಿ ಹಾಗೂ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ. ಆದರೆ ಇದು ಅನ್ಯಾಯದ ಕ್ರಮ ಎಂದು ಬಿಜೆಪಿ ಹೇಳುತ್ತಿದ್ದು, ಕಾಂಗ್ರೆಸ್ ಸರ್ಕಾರವನ್ನು ಉಳಿಸಲು ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ದೂರಿದ್ದಾರೆ.