ಕಾಶ್ಮೀರ, ;ಉಗ್ರಗಾಮಿಗಳು ಮತ್ತು ಬಿಎಸ್ಎಫ್ ಯೋಧರ ನಡುವೆ ರಾತ್ರಿಯಿಡಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ನಾಗರೀಕರು, ಇಬ್ಬರು ಯೋಧರು ಗಾಯಗೊಂಡಿದ್ದು, ಒಬ್ಬ ಮಿಲಿಟನ್ ಮೃತಪಟ್ಟಿದ್ದಾರೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಭಾಗದ ಕುಲ್ಗಮ್ ಪ್ರದೇಶದಲ್ಲಿ ನಿನ್ನೆ ರಾತ್ರಿ ಇಡೀ ಈ ಗುಂಡಿನ ಕಾಳಗ ನಡೆದಿದೆ. ಲಷ್ಕರ್-ಇ-ತೋಯಿಬಾದ ಒಬ್ಬ ಉಗ್ರನನ್ನು ಹೊಡೆದು ಉರುಳಿಸಲಾಗಿದೆ. ಮತ್ತೊಬ್ಬ ಪರಾರಿಯಾಗಿದ್ದಾನೆ.
ಈ ಉಗ್ರರು ಸ್ವತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು. ಮನೆಯೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧರಿಸಿ ಬಿಎಸ್ಎಫ್ ಯೋಧರು ಪ್ರದೇಶವನ್ನು ಸುತ್ತುವರೆದರು.
ಆ ವೇಳೆ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಯೋಧರು ಪ್ರತ್ಯುತ್ತರ ನೀಡಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಗುಂಡಿನ ಕಾಳಗದಿಂದ ಹೆದ್ದಾರಿಯ ಸಂಚಾರವನ್ನು ತಡೆ ಹಿಡಿಯಲಾಗಿತ್ತು. ಇಂದು ಬೆಳಗ್ಗೆ ಅದನದ್ನು ಮತ್ತೆ ಆರಂಭಿಸಲಾಗಿದೆ.
ಉಗ್ರಗಾಮಿಗಳು ಮತ್ತು ಬಿಎಸ್ಎಫ್ ಯೋಧರ ನಡುವೆ ಗುಂಡಿನ ಕಾಳಗ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.