ಕಾಶ್ಮೀರ, ;ಉಗ್ರಗಾಮಿಗಳು ಮತ್ತು ಬಿಎಸ್ಎಫ್ ಯೋಧರ ನಡುವೆ ರಾತ್ರಿಯಿಡಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ನಾಗರೀಕರು, ಇಬ್ಬರು ಯೋಧರು ಗಾಯಗೊಂಡಿದ್ದು, ಒಬ್ಬ ಮಿಲಿಟನ್ ಮೃತಪಟ್ಟಿದ್ದಾರೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಭಾಗದ ಕುಲ್ಗಮ್ ಪ್ರದೇಶದಲ್ಲಿ ನಿನ್ನೆ ರಾತ್ರಿ ಇಡೀ ಈ ಗುಂಡಿನ ಕಾಳಗ ನಡೆದಿದೆ. ಲಷ್ಕರ್-ಇ-ತೋಯಿಬಾದ ಒಬ್ಬ ಉಗ್ರನನ್ನು ಹೊಡೆದು ಉರುಳಿಸಲಾಗಿದೆ. ಮತ್ತೊಬ್ಬ ಪರಾರಿಯಾಗಿದ್ದಾನೆ.
ಈ ಉಗ್ರರು ಸ್ವತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು. ಮನೆಯೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧರಿಸಿ ಬಿಎಸ್ಎಫ್ ಯೋಧರು ಪ್ರದೇಶವನ್ನು ಸುತ್ತುವರೆದರು.
ಆ ವೇಳೆ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಯೋಧರು ಪ್ರತ್ಯುತ್ತರ ನೀಡಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ. ಗುಂಡಿನ ಕಾಳಗದಿಂದ ಹೆದ್ದಾರಿಯ ಸಂಚಾರವನ್ನು ತಡೆ ಹಿಡಿಯಲಾಗಿತ್ತು. ಇಂದು ಬೆಳಗ್ಗೆ ಅದನದ್ನು ಮತ್ತೆ ಆರಂಭಿಸಲಾಗಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…