ಜಮ್ಮುಕಾಶ್ಮೀರ: ಉತ್ತರ ಕಾಶ್ಮೀರದ ಬಂಡಿಪೋರಾ ನಿಶಾತ್ ಪಾರ್ಕ್ ಬಳಿ ಗಸ್ತಿನಲ್ಲಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್G ನಡೆಸಿದ್ದು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿ ನಾಲ್ವರು ಗಾಯಗೊಂಡಿದ್ದಾರೆ.
ನಮ್ಮ ಭದ್ರತಾ ಸಿಬ್ಬಂದಿಯ ಮೇಲಿನ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಹುತಾತ್ಮರಾದ ವಿಶೇಷ ಪೊಲೀಸ್ ಪಡೆಯ ಜುರ್ಬೇ ಅಹ್ಮದ್ ಶಾ ಅವರ ಶೌರ್ಯಕ್ಕೆ ವಂದಿಸುತ್ತೇನೆ ಅವರ ತ್ಯಾಗವನ್ನು ನಾವು ಮರೆಯುವುದಿಲ್ಲ. ಪ್ರತಿಯೊಂದು ಹನಿ ಕಣ್ಣೀರಿಗೂ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.ಕಳೆದ ರಾತ್ರಿ ಈ ಘಟನೆ ನಡೆದಿದೆ,ಭದ್ರತಾ ಅಧಿಕಾರಿಗಳು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.