ಶ್ರೀನಗರ : ಕಾಶ್ಮೀರದಲ್ಲಿ ಸೋಮವಾರ ಎರಡು ಪ್ರತ್ಯೇಕ ಉಗ್ರರ ಗುಂಡಿನ ದಾಳಿಯಲ್ಲಿ ನಾಗರಿಕರೊಬ್ಬರು ಮೃತಪಟ್ಟಿದ್ದು, ಬಿಹಾರದ ಕೂಲಿಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.
‘ಮಧ್ಯ ಕಾಶ್ಮೀರದ ಬುಡ್ಗಾಂ ಜಿಲ್ಲೆಯ ಗೋಟ್ಪೋರಾ ಪ್ರದೇಶದಲ್ಲಿ ತಮ್ಮ ಮನೆಯ ಬಳಿ ನಿಂತಿದ್ದ ನಾಗರಿಕರೊಬ್ಬರ ಮೇಲೆ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿ ನಡೆಸಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟರು.
ಹತ್ಯೆಗೀಡಾದವರನ್ನು ತಜಮುಲ್-ಮೊಹಿದ್ದೀನ್ ರಾಥರ್ ಎಂದು ಗುರುತಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
‘ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಗಂಗೂ ಪ್ರದೇಶದಲ್ಲಿ ಸೋಮವಾರ ಸಂಜೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಹಾರದ ಕೂಲಿಕಾರ್ಮಿಕ ಬಿಸುಜಿತ್ ಕುಮಾರ್ ಗಾಯಗೊಂಡಿದ್ದು, ಅವರನ್ನು ಪುಲ್ವಾಮ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.
ಕಳೆದ ಒಂದು ತಿಂಗಳ ಅವಧಿಯಲ್ಲಿ ಕಾಶ್ಮೀರದಲ್ಲಿ ನಾಗರಿಕರ ಮೇಲೆ ಉಗ್ರರ ದಾಳಿ ಹೆಚ್ಚಾಗಿದ್ದು, ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಸೇರಿ ಹಲವು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…