News Karnataka Kannada
Saturday, April 27 2024
ಜಮ್ಮು-ಕಾಶ್ಮೀರ

ಕಾಶ್ಮೀರದ ಯುವಕರು ಬಿಜೆಪಿ ಸರಕಾರದ ಮೇಲೆ ಸಿಟ್ಟಾಗಿದ್ದಾರೆ : ಮೆಹಬೂಬ ಮುಫ್ತಿ

Untitled 1
Photo Credit :

ಶ್ರೀನಗರ: ಬಿಜೆಪಿ ಸರ್ಕಾರದ ಮಸ್ಕುಲರ್ ನೀತಿ ಕಾಶ್ಮೀರದಲ್ಲಿ ಯುವಕರನ್ನು ಉಗ್ರಗಾಮಿತ್ವದತ್ತ ತಳ್ಳುತ್ತಿದೆ ಎಂದು ಪಿಡಿಪಿ ಅಧ್ಯಕ್ಷೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

370ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿ ಉಂಟಾದ ಪರಿಸ್ಥಿತಿಯನ್ನು ನಿಯಂತ್ರಿಸಲು ಮಸ್ಕುಲರ್ ನೀತಿಯನ್ನು ಬಳಸುತ್ತಿರುವ ಬಿಜೆಪಿ ಸರ್ಕಾರದ ಮೇಲೆ ಯುವಕರು ಸಾಕಷ್ಟು ಸಿಟ್ಟಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀನಗರದಲ್ಲಿನ ತಮ್ಮ ಸಗುಪ್ಕರ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೆಹಬೂಬಾ, ಮಸ್ಕುಲರ್ ನೀತಿ ಮತ್ತು ಯುವಕರನ್ನು ಬಂಧಿಸುವ ಬದಲು, ಮುಫ್ತಿ ಸಯೀದ್ ಮತ್ತು ಭಾರತದ ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವರು ಪ್ರಾರಂಭಿಸಿದ ಹೀಲಿಂಗ್​ ಟಚ್​ ನೀತಿಯನ್ನು ಸರ್ಕಾರ ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯದ ಸಮನ್ಸ್ ಕುರಿತ ಪ್ರಶ್ನೆಗೆ ಉತ್ತರಿಸಿದ ಮೆಹಬೂಬಾ, ಬಿಜೆಪಿ ಸರ್ಕಾರವು ಪಿಎಜಿಡಿಯ ಏಕತೆಗೆ ಹೆದರಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು