News Karnataka Kannada
Monday, May 13 2024
ಜಮ್ಮು-ಕಾಶ್ಮೀರ

ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಪ್ರಯೋಗ : ತನಿಖೆಗೆ ಅಗ್ರಹ

Untitled 1
Photo Credit :

ಶ್ರೀನಗರ:  ಕಾಶ್ಮೀರಿ ಪಂಡಿತ ರಾಹುಲ್ ಭಟ್ ಹತ್ಯೆಯನ್ನು ವಿರೋಧಿಸಿ ನಡೆಸಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಶೆಲ್ ದಾಳಿ ನಡೆದಿದ್ದು, ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತನಿಖೆಗೆ ಆದೇಶಿಸಿದ್ದಾರೆ.

ಸರ್ಕಾರಿ ಕಚೇರಿಯೊಳಗೆ ಭಯೋತ್ಪಾದಕರು ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆ ಮಾಡಿದ್ದು, ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿತ್ತು ಈ ವೇಳೆ ಪೊಲಿಸರು ಅಶ್ರುವಾಯು ಶೆಲ್ ದಾಳಿ ಮಾಡಿದ್ದು, ಈ ಕಾರ್ಯದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತಾತ್ಮಕ ಮೂಲಗಳು ತಿಳಿಸಿವೆ.

ಇನ್ನು ಈ ಘಟನೆಯ ನಂತರ ಕಾಶ್ಮೀರಿ ವಲಸಿಗ ಪ್ರತಿಭಟನಾಕಾರರನ್ನು ಚದುರಿಸಲು ಬಲಪ್ರಯೋಗದ ತನಿಖೆಯ ಜೊತೆಗೆ ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಬೇಕು. ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಎಲ್ಲಿಯೂ ಬಲಪ್ರಯೋಗ ಮಾಡದಂತೆ ಆಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಮನೋಜ್ ಸಿನ್ಹಾ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು