ಶ್ರೀನಗರ : ಲಷ್ಕರ್-ಎ-ತೊಯ್ಬಾದಸಹ ಸಂಘಟನೆ, ಭಯೋತ್ಪಾದಕ ಗುಂಪು ಯುನೈಟೆಡ್ ಲಿಬರೇಷನ್ ಫ್ರಂಟ್, ಕಾಶ್ಮೀರದಲ್ಲಿ ಇಬ್ಬರು ಬಿಹಾರಿ ಕಾರ್ಮಿಕರ ಭೀಕರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. ವಲಸಿಗರ ಮೇಲೆ ಇತ್ತೀಚಿನ ದಾಳಿಗಳ ನಡುವೆ, ಭಯೋತ್ಪಾದಕ ಸಂಘಟನೆ ವಲಸೆ ಕಾರ್ಮಿಕರಿಗೆ ಕಾಶ್ಮೀರ ಕಣಿವೆಯನ್ನು ತೊರೆಯುವಂತೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾನುವಾರ ಮನೆಗೆ ನುಗ್ಗಿದ ಭಯೋತ್ಪಾದಕರು ಬಿಹಾರದ ಇಬ್ಬರು ಕಾರ್ಮಿಕರನ್ನು ಗುಂಡಿಕ್ಕಿ ಕೊಂದರು ಮತ್ತು ಇನ್ನೊಬ್ಬರನ್ನು ಗಾಯಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರ ಮೇಲೆ ನಡೆದ ಸರಣಿ ದಾಳಿಗಳಲ್ಲಿ ಇದು ಇತ್ತೀಚಿನದು.
ಇದು ಒಂದು ದಿನದಲ್ಲಿ ಸ್ಥಳೀಯೇತರ ಕಾರ್ಮಿಕರ ಮೇಲೆ ನಡೆದ ಮೂರನೇ ಭಯೋತ್ಪಾದಕ ದಾಳಿಯಾಗಿದೆ ಇದಕ್ಕೂ ಮುನ್ನ ಬಿಹಾರದ ಬೀದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಬಡಗಿಯನ್ನು ಶನಿವಾರ ಸಂಜೆ ಗುಂಡಿಕ್ಕಿ ಕೊಂದಿದ್ದರು.
ಈ ತಿಂಗಳು, ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಮೇಲೆ ನಡೆದ ಉದ್ದೇಶಿತ ದಾಳಿಯಲ್ಲಿ ೧೧ ಜನರು ಪ್ರಾಣ ಕಳೆದುಕೊಂಡಿದ್ದಾರೆ.