ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಓರ್ವ ಪ್ರಜೆಯನ್ನು ಭಾರತೀಯ ಸೈನಿಕರು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.ನಿಯಂತ್ರಣ ರೇಖೆಯುದ್ದಕ್ಕೂ ಉಭಯ ಸೇನೆಗಳ ನಡುವೆ ನಡೆಯುತ್ತಿರುವ ಕದನ ವಿರಾಮ ತಿಳುವಳಿಕೆಯ ಸಂಪೂರ್ಣ ಉಲ್ಲಂಘನೆ ಅಥವಾ ಪಾಕಿಸ್ತಾನ ಸೇನೆಯ ಗಡಿ ಕ್ರಿಯಾ ತಂಡ ಜನವರಿ 1 ರಂದು ಕುಪ್ವಾರ ಜಿಲ್ಲೆಯ ಕೇರಾನ್ ವಲಯದಲ್ಲಿ ಒಳನುಸುಳಲು ಯತ್ನಿಸಿದೆ.
ಕ್ಷಿಪ್ರ ಕಾರ್ಯಾಚರಣೆ ಕೈಗೊಂಡು ಭಾರತೀಯ ಸೈನಿಕರು ಗಡಿ ನುಸುಳುವಿಕೆ ವಿಫಲಗೊಳಿಸಿ, ಉಗ್ರನನ್ನು ಹತ್ಯೆ ಮಾಡಿರುವುದಾಗಿ ಅಧಿಕಾರಿ ಹೇಳಿದ್ದಾರೆ.ಆತನಿಂದ ಎಕೆ-47 ರೈಫಲ್ ಮತ್ತು ಅಪಾರ ಪ್ರಮಾಣದ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ
ಗಡಿಯೊಳಗೆ ನುಸುಳಲು ಯತ್ನಿಸಿದ ವ್ಯಕ್ತಿಯನ್ನು ಪಾಕಿಸ್ತಾನದ ಮೊಹಮ್ಮದ್ ಸಬೀರ್ ಮಲ್ಲಿಕ್ ಎಂದು ಗುರುತಿಸಲಾಗಿದೆ. ಆತನಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.