ನವದೆಹಲಿ, ; ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸಹದ ಸಂದರ್ಭದಲ್ಲಿ ಭಾಷಣ ಮಾಡುವಾಗ ಜಮ್ಮು -ಕಾಶ್ಮೀರಕ್ಕೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ಘೋಷಣೆ ಮಾಡಬೇಕು ಎಂದು ರಾಷ್ಟ್ರ ಮಂಚ್ ಒತ್ತಾಯಿಸಿದೆ.
ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರು ಸ್ಥಾಪಿಸಿದ ರಾಷ್ಟ್ರ ಮಂಚ್ ಇಂದು ಹೇಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ 2019ರ ಆಗಸ್ಟ್ 5ರಂದು ಜಮ್ಮು ಕಾಶ್ಮೀರಕ್ಕೆ ಸಂವಿಧಾನದ ಪರಿಚ್ಚೇಧ 370ರ ಅಡಿ ನೀಡಲಾಗಿದ್ದ ವಿಶೇಷ ಸ್ಥಾನ ಮಾನಗಳನ್ನು ರದ್ದುಗೊಳಿಸಿದೆ. ಅನಂತರ ಅಲ್ಲಿ ಪ್ರಶ್ನಾರ್ಹ ಕ್ರಮಗಳು ನಡೆದಿವೆ. ಕೇಂದ್ರಾಡಳಿತ ಪ್ರದೇಶವಾಗಿದ್ದ ಜಮ್ಮು-ಕಾಶ್ಮೀರ ಇಬ್ಬಾಗವಾಗಿದ್ದು, ಲಡಾಕ್ ಪ್ರತ್ಯೇಕ ಎಂಬಂತಾಗಿದೆ.
ಅಲ್ಲಿ ಕೈಗೊಳ್ಳಲಾದ ಕ್ರಮಗಳು ಹಾಸ್ಯಾಸ್ಪದ ಮತ್ತು ಅಪ್ರಜಾಸತಾತ್ಮಕವಾಗಿದೆ. ಅಲ್ಲಿನ ಜನರ ನಂಬಿಕೆಗೆ ದ್ರೋಹ ಮಾಡಲಾಗಿದೆ, ಅವರ ಭಾವನೆಗಳಿಗೆ ಧಕ್ಕೆ ತಂದಿವೆ. ಅಲ್ಲಿನ ಯಾರ ಜೊತೆಯೂ ಚರ್ಚೆ ಮಾಡದೆ ಮೋದಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅದರ ಪರಿಣಾಮ ಲಕ್ಷಾಂತರ ಯುವಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಮಂಚ್ನ ಸಂಚಾಲಕರಾದ ಶಹಿದ್ ಸಿದ್ಧಿಕಿ, ಸುಧೀಂದ್ರ ಕುಲಕರ್ಣಿ ಆರೋಪಿಸಿದ್ದಾರೆ.
ಜಮ್ಮು -ಕಾಶ್ಮೀರಕ್ಕೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನಕ್ಕೆ ಒತ್ತಾಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.