ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಗಾಯಗೊಂಡಿದ್ದು, ಅದರಲ್ಲಿ ಒಬ್ಬ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದರೆ.
ಗುಂಡಿನ ದಾಳಿ ಮಾಡಿದ ದುಷ್ಕರ್ಮಿಗಳಿಗಾಗಿ ಭದ್ರತೆ ಪಡೆಗಳು ಶೋಧ ಕಾರ್ಯ ಆರಂಭಿಸಿದ್ದು,ಇಡೀ ಪ್ರದೇಶವನ್ನು ಸುತ್ತುವರಿದಿದ್ದಾರೆ.
ಇಲ್ಲಿನ ಮೈಸಿಮಾ ಪ್ರದೇಶದಲ್ಲಿ ಸೋಮವಾರ ಬಂದೂಕುಧಾರಿಗಳು ಏಕಾಏಕಿ ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಪರಿಣಾಮ ಒಬ್ಬ ಯೋಧ ಅಸುನೀಗಿದರೆ, ಇನ್ನೊಬ್ಬ ಯೋಧ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.