ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ತಡರಾತ್ರಿ ಪ್ರತ್ಯೇಕ ಭಯೋತ್ಪಾದಕ ದಾಳಿ ನಡೆದಿದ್ದು, ಈ ವೇಳೆ ಒಬ್ಬ ನಾಗರಿಕ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.
ಶ್ರೀನಗರದ ವಿವಿಧ ಸ್ಥಳಗಳಳ್ಲಿ ಅಪರಿಚಿತ ಬಂದೂಕುಧಾರಿಗಳು ಇಬ್ಬರು ನಾಗರಿಕರ ಮೇಲೆ ಗುಂಡು ಹಾರಿಸಿದ್ದು, ಮತ್ತೊಂದೆಡೆ ಸಿಆರ್ ಪಿಎಫ್ ಬಂಕರ್ ಮೇಲೆ ಆರು ಗಂಟೆಗಳ ಕಾಲ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಶ್ರೀನಗರದ ಕರಣ್ ನಗರದಲ್ಲಿ ನಡೆದ ದಾಳಿಯಲ್ಲಿ ಮಜೀದ್ ಗುರು ಎಂಬ ಸ್ಥಳೀಯನ ಮೇಲೆ ಗುಂಡು ಹಾರಿಸಲಾಗಿದ್ದು, ಮಜೀದ್ ಗುರುವಿಗೆ ಗಂಭೀರ ಗಾಯಗಳಾಗಿತ್ತು. ಆಸ್ಪತ್ರೆಗೆ ದಾಖಲಿಸಿತ್ತಾದರೂ ಮಾರ್ಗ ಮಧ್ಯೆ ವ್ಯಕ್ತಿ ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.