ಜಮ್ಮು ಕಾಶ್ಮೀರ : ಬಾರಾಮುಲ್ಲಾದಲ್ಲಿ ಮದ್ಯದಂಗಡಿಯೊಂದರ ಮೇಲೆ ಶಂಕಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ವೈನ್ ಶಾಪ್ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದು ಅವರ ಮೂವರು ಸಹೋದ್ಯೋಗಿಗಳು ಗಾಯಗೊಂಡಿದ್ದಾರೆ.
ಮೋಟರ್ ಬೈಕಿನಲ್ಲಿ ಬಂದ ದಾಳಿಕೋರರು ಏಕಾಏಕಿ ವೈನ್ ಶಾಪ್ನ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. ಸಾವನ್ನಪ್ಪಿದ ವ್ಯಕ್ತಿಯನ್ನು ಬಕ್ರ ರಾಜೌರಿಯ ರಂಜಿತ್ ಸಿಂಗ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಕಥುವಾದ ಗೋವರ್ಧನ್ ಸಿಂಗ್ ಮತ್ತು ರವಿಕುಮಾರ್ ಮತ್ತು ಕಂಗ್ರಾ ರಾಜೌರಿಯ ಗೋವಿಂದ್ ಸಿಂಗ್ ಎಂದು ಗುರುತಿಸಲಾಗಿದೆ. ಗೋವಿಂದ್ ಸಿಂಗ್ ರವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೋಲೀಸ್ ಮೂಲಗಳು ಹೇಳಿವೆ.
ಇತ್ತೀಚೆಗೆ ಶ್ರಿನಗರದ ಹೊರಭಾಗದಲ್ಲಿ ವೈನ್ ಶಾಪ್ ತೆರೆಯಲು ಜಮ್ಮು ಕಾಶ್ಮೀರ ಸರ್ಕಾರವು ಪರವಾನಿಗೆ ನೀಡಿತ್ತು. ಆದರೆ ಇದನ್ನು ಧಾರ್ಮಿಕ ಪಕ್ಷಗಳು ಮತ್ತು ಕೆಲವು ಸ್ಥಳೀಯರು ತೀವ್ರವಾಗಿ ವಿರೋಧಿಸಿದ್ದರು. ಜನರ ಭಾವನೆಗಳಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ವೈನ್ ಶಾಪನ್ನು ಸ್ಥಳಾಂತರಿಸಲು ಜಮ್ಮು ಕಾಶ್ಮೀರದ ಬಿಜೆಪಿ ಘಟಕ ಆಗ್ರಹಿಸಿತ್ತು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…