ಜಮ್ಮು ಮತ್ತು ಕಾಶ್ಮೀರ : ಉಧಂಪುರ ಜಿಲ್ಲೆಯ ಜಮ್ಮು ಮತ್ತು ಕಾಶ್ಮೀರ ಹೆದ್ದಾರಿಯ ಬಟ್ಟಲ್ ಬಲ್ಲಿಯನ್ ಪ್ರದೇಶದಲ್ಲಿ ಬಸ್ ಪಲ್ಟಿಯಾದ ಪರಿಣಾಮ 25 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ ಜಮ್ಮುವಿನಿಂದ ಬರುತ್ತಿದ್ದ ಬಸ್ ದೋಡಾ ಜಿಲ್ಲೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಇನ್ನು ಗಾಯಾಳುಗಳನ್ನು ಉಧಮ್ಪುರ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾಸಲಾಗಿದೆ ಎಂದ ತಿಳಿದುಬಂದಿದೆ.