ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಮಂಗಳವಾರ ರಾತ್ರಿ ಭಯೋತ್ಪಾದಕರಿಂದ ಪ್ರತ್ಯೇಕ ಗುಂಡಿನ ದಾಳಿ ನಡೆದಿದ್ದು, ಇದರಿಂದ ಮೂವರು ನಾಗರಿಕರು ಮೃತಪಟ್ಟಿದ್ದಾರೆ.
ಕಾಶ್ಮೀರದ ಔಷಧಾಲಯದ ಮೇಲೆ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರು, ಉದ್ಯಮಿ ಮಖನ್ ಲಾಲ್ ಬಿಂದ್ರೋ ರನ್ನು ಹತ್ಯೆ ಮಾಡಿದ್ದಾರೆ. ಮತ್ತೊಂದೆಡೆ ಬೀದಿ ಬದಿ ವ್ಯಾಪಾರಿ ವಿರೇಂದ್ರ ಪಾಸ್ವಾನ್ ಎಂಬುವವರನ್ನು ಹತ್ಯೆ ಮಾಡಿದ್ದಾರೆ. ಉತ್ತರ ಕಾಶ್ಮೀರದ ಬಂಡೀಪೊರಾ ಜಿಲ್ಲೆಯಲ್ಲಿ ಮೊಹಮದ್ ಶಫಿ ಲೋನ್ ರನ್ನು ಭಯೋತ್ಪಾದಕರು ಕೊಂದಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ವೇಳೆ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಜಮ್ಮು ಕಾಶ್ಮೀರದ ಲೆ.ಗವರ್ನರ್ ಮನೋಜ್ ಸಿನ್ಹಾ ಅವರು, ವೀರೇಂದ್ರ ಪಾಸ್ವಾನ್ ಮತ್ತು ಮೊಹ್ಮದ್ ಶಾಫಿ ಲೋನ್ ಅವರನ್ನು ಭಯೋತ್ಪಾದಕರು ಹತ್ಯೆ ಮಾಡಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಉದ್ಯಮಿ ಬಿಂದ್ರೂ ಅವರು ಯಾವಾಗಲೂ ಬಡವರ ಬಗ್ಗೆ ಕಾಳಜಿ ವಹಿಸುವ ಒಬ್ಬ ಸಹಾಯಕ ಮತ್ತು ಸಮಚಿತ್ತದ ವ್ಯಕ್ತಿಯಾಗಿದ್ದರು ಎಂದರು.